Wednesday, August 26, 2026
spot_imgspot_img
spot_imgspot_img

ಗುಂಡ್ಯದಲ್ಲಿ ಕಾರು-ಲಾರಿ ಅಪಘಾತ: ಸುಳ್ಯ ಎಲಿಮಲೆಯ ಇಬ್ಬರಿಗೆ ಗಾಯ

- Advertisement -
- Advertisement -

ಸುಬ್ರಹ್ಮಣ್ಯ: ಎಲಿಮಲೆ ಮೂಲದ ಕಾರೊಂದು ಸುಬ್ರಹ್ಮಣ್ಯ ಸಮೀಪದ ಗುಂಡ್ಯದಲ್ಲಿ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ ಘಟನೆ ಇಂದು ನಡೆದಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಕಿಶನ್ ಮಾವಿನಕಟ್ಟೆ ಹಾಗೂ ಹರ್ಷಿತ್ ಎಲಿಮಲೆ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

- Advertisement -

Related news

error: Content is protected !!