Saturday, June 28, 2025
spot_imgspot_img
spot_imgspot_img

ಕುವೈತ್‌ನಲ್ಲಿ ಭೀಕರ ಅಗ್ನಿ ದುರಂತಕ್ಕೆ 41 ಭಾರತೀಯರ ಬಲಿ

- Advertisement -
- Advertisement -

ಕುವೈತ್‌ನ ಮಂಗಾಫ್ ನಗರದಲ್ಲಿರುವ ಆರು ಮಹಡಿಯ ಬೃಹತ್‌ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ಎಲ್ಲ 41 ಮಂದಿಯೂ ಭಾರತೀಯರೇ ಎಂಬ ಮಾಹಿತಿ ಲಭ್ಯವಾಗಿದೆ. ಆರು ಮಹಡಿಯ ಕಟ್ಟಡದ ಅಡುಗೆ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬಳಿಕ ಇಡೀ ಕಟ್ಟಡಕ್ಕೆ ಆವರಿಸಿದೆ. ಇದರಿಂದಾಗಿ 41 ಭಾರತೀಯರು ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಈ ಕಟ್ಟಡದಲ್ಲಿ ಸುಮಾರು 195 ಮಂದಿ ವಾಸಿಸುತ್ತಿದ್ದರು. ಅದರಲ್ಲೂ ಈ ಕಟ್ಟಡದಲ್ಲಿ ಹೆಚ್ಚಾಗಿ ಮಲಯಾಳಿಗಳು ವಾಸಿಸುತ್ತಿದ್ದರು. ಮೃತ ಐವರ ಪೈಕಿ ಇಬ್ಬರು ತಮಿಳುನಾಡಿನವರು ಹಾಗೂ ಉಳಿದವರು ಉತ್ತರ ಭಾರತದವರು ಎನ್ನಲಾಗುತ್ತಿದೆ.

ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹಾಗೂ ಗಾಯಗೊಂಡ ಎಲ್ಲರನ್ನೂ ಅಗತ್ಯ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಇನ್ನು ಗಾಯಕೊಂಡವರಿಗೆ ಸೂಕ್ತ ವೈದ್ಯಕೀಯ ಆರೈಕೆ ಒದಗಿಸಲು ವೈದ್ಯಕೀಯ ತಂಡಗಳು ತಮ್ಮ ಕೈಲಾದಷ್ಟು ಪ್ರಯತ್ನ ಮಾಡುತ್ತಿವೆ ಎಂದು ಕುವೈತ್ ಆರೋಗ್ಯ ಸಚಿವಾಲಯ ತಿಳಿಸಿದೆ.

ಇಂದು ಮುಂಜಾನೆ 4:30ರ ಸುಮಾರಿಗೆ ಕಾರ್ಮಿಕ ಶಿಬಿರದ ಅಡುಗೆಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ಕಂಡು ಕೆಲವರು ಅಪಾರ್ಟ್ಮೆಂಟ್‌ನಿಂದ ಜಿಗಿದು ಮೃತಪಟ್ಟಿದ್ದರೆ ಇತರರು ಸುಟ್ಟಗಾಯಗಳು ಮತ್ತು ಹೊಗೆ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!