Saturday, July 18, 2026
spot_imgspot_img
spot_imgspot_img

ಕರ್ನಾಟಕ ಹೈಕೋರ್ಟ್‌ಗೆ ಸರ್ಕಾರಿ ವಕೀಲರಾಗಿ ಚಿದಾನಂದ ಬಂಗೇರ ನೇಮಕ

- Advertisement -
- Advertisement -

ಬಂಟ್ವಾಳ: ಕರ್ನಾಟಕ ಸರ್ಕಾರದ ಅಧಿಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಬರಿಮಾರು ಗ್ರಾಮದ ಹಿರಿಯ ವಕೀಲ ಚಿದಾನಂದ ಬಂಗೇರ ಅವರನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಸರ್ಕಾರಿ ವಕೀಲರಾಗಿ (Government Advocate) ನೇಮಕ ಮಾಡಲಾಗಿದೆ.

ಸರ್ಕಾರದ ಪರವಾಗಿ ಉಚ್ಚ ನ್ಯಾಯಾಲಯದಲ್ಲಿ ವಿವಿಧ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸುವ ಜವಾಬ್ದಾರಿಯನ್ನು ಅವರು ವಹಿಸಿಕೊಳ್ಳಲಿದ್ದು, ಅವರ ನೇಮಕಕ್ಕೆ ಕಾನೂನು ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.ಚಿದಾನಂದ ಬಂಗೇರ ಅವರು ಎಸ್‌ಡಿಎಂ ಕಾನೂನು ಮಹಾವಿದ್ಯಾಲಯದಲ್ಲಿ ಎಲ್‌.ಎಲ್‌.ಬಿ. ಪದವಿ ಪಡೆದಿದ್ದು, ಹಲವು ವರ್ಷಗಳಿಂದ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಾನೂನು ಜ್ಞಾನ, ಸಮರ್ಥ ವಾದ ಮಂಡನೆ, ವೃತ್ತಿಪರ ನಿಷ್ಠೆ ಹಾಗೂ ಪ್ರಾಮಾಣಿಕ ಸೇವಾ ಮನೋಭಾವದಿಂದ ಅವರು ಉತ್ತಮ ಹೆಸರು ಗಳಿಸಿದ್ದಾರೆ.

ಅವರ ನೇಮಕದಿಂದ ಬರಿಮಾರು ಗ್ರಾಮ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ವಲಯದಲ್ಲಿ ಸಂತಸ ಮೂಡಿದೆ. ವಿವಿಧ ವಕೀಲರು, ಸಹೋದ್ಯೋಗಿಗಳು, ಸ್ನೇಹಿತರು, ಹಿತೈಷಿಗಳು ಹಾಗೂ ಗ್ರಾಮಸ್ಥರು ಚಿದಾನಂದ ಬಂಗೇರ ಅವರಿಗೆ ಅಭಿನಂದನೆ ಸಲ್ಲಿಸಿ, ಹೊಸ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಶುಭ ಹಾರೈಸಿದ್ದಾರೆ.

ಸರ್ಕಾರದ ಪರವಾಗಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಮಹತ್ವದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ರಾಜ್ಯದ ಕಾನೂನು ಸೇವೆಗೆ ಇನ್ನಷ್ಟು ಬಲ ತುಂಬಲಿದ್ದಾರೆ ಎಂಬ ವಿಶ್ವಾಸವನ್ನು ಕಾನೂನು ವಲಯದ ಗಣ್ಯರು ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!