- Advertisement -
- Advertisement -

ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಹಿರಿಯ ಕಾರ್ಯಕರ್ತ ಜಯಶ್ಯಾಮ್ ನೀರ್ಕಜೆ ಅವರ ಪತ್ನಿ ಭಾರತಿ (54) ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು.

ಪುತ್ತೂರು ಗ್ರಾಮದ ಅಜ್ಜಿನಡ್ಕ ಸಮೀಪದ ನೀರ್ಕಜೆಯಲ್ಲಿ ಪತಿ ಹಾಗೂ ಕುಟುಂಬದೊಂದಿಗೆ ವಾಸವಾಗಿದ್ದ ಭಾರತಿ ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಮೃತರು ಪತಿ ಜಯಶ್ಯಾಮ್, ಪುತ್ರ ಅಜೇಯ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ನೇತ್ರದಾನಕ್ಕೆ ನಿರ್ಧಾರ:
ಮೃತ ಭಾರತಿ ಅವರು ಜೀವಿತಾವಧಿಯಲ್ಲಿ ವ್ಯಕ್ತಪಡಿಸಿದ್ದ ಇಚ್ಛೆಯಂತೆ ಅವರ ಕಣ್ಣುಗಳನ್ನು ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಪುತ್ತೂರಿನ ಆದರ್ಶ ಆಸ್ಪತ್ರೆಯಲ್ಲಿ ನೇತ್ರದಾನ ಪ್ರಕ್ರಿಯೆ ನಡೆಯಲಿದೆ ಎಂದು ಮೃತರ ಆಪ್ತರು ಮಾಧ್ಯಮಕ್ಕೆ ತಿಳಿಸಿದ್ದಾರೆ.

- Advertisement -








