Wednesday, April 24, 2024
spot_imgspot_img
spot_imgspot_img

6ವರ್ಷಕ್ಕಿಂತಲೂ ಹೆಚ್ಚಿನ ಶಿಕ್ಷಾರ್ಹ ಅಪರಾಧಗಳಿಗೆ ವಿಧಿವಿಜ್ಞಾನ ತನಿಖೆ ಕಡ್ಡಾಯಗೊಳಿಸಲು ಚಿಂತನೆ; ಅಮಿತ್​ ಶಾ

- Advertisement -G L Acharya panikkar
- Advertisement -
driving

ಆರು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಪ್ರಮಾಣದ ಶಿಕ್ಷೆಯನ್ನು ಒಳಗೊಂಡಿರುವ ಯಾವುದೇ ವಿಧದ ಅಪರಾಧ ನಡೆದಾಗ, ಅದರ ತನಿಖೆ ಪ್ರಕ್ರಿಯೆ ವಿಧಿವಿಜ್ಞಾನ ತನಿಖೆಯನ್ನು ಒಳಗೊಂಡಿರಬೇಕು ಎಂದು ಗೃಹ ಸಚಿವ ಅಮಿತ್​ ಶಾ ಹೇಳಿದರು. ಇಂದು ಗೋವಾದಲ್ಲಿ ಮಾತನಾಡಿದ ಅವರು, ಆರು ಮತ್ತು ಅದಕ್ಕೂ ಹೆಚ್ಚಿನ ಅವಧಿಯ ಶಿಕ್ಷಾರ್ಹ ಅಪರಾಧಗಳು (ಗಂಭೀರ ಅಪರಾಧಗಳು) ನಡೆದಾಗ, ಆ ಸ್ಥಳಗಳಿಗೆ ವಿಧಿ ವಿಜ್ಞಾನ ತಂಡಗಳು ಕಡ್ಡಾಯವಾಗಿ ಭೇಟಿ ನೀಡಿವೆ ಎಂಬುದನ್ನು ನಾವು ಖಚಿತ ಪಡಿಸಿಕೊಳ್ಳುವತ್ತ ಗಮನಹರಿಸಲಿದ್ದೇವೆ ಎಂದು ತಿಳಿಸಿದ್ದಾರೆ.

ಯಾವುದೇ ಗಂಭೀರ ಪ್ರಕರಣದ ಸಂದರ್ಭದಲ್ಲಿ ವಿಧಿವಿಜ್ಞಾನ ಸಾಕ್ಷ್ಯವು ಪ್ರಾಸಿಕ್ಯೂಷನ್​​​ನ್ನು ಬಲಪಡಿಸುತ್ತದೆ.ಹಾಗೇ, ಈ ಸಾಕ್ಷ್ಯಗಳು ಆರೋಪಿಯ ಶಿಕ್ಷೆಯ ಪ್ರಮಾಣವನ್ನು ಸರಿಯಾಗಿ ತಿಳಿಸುತ್ತವೆ. ಹೆಚ್ಚಿಸಲೂ ಬಹುದು ಎಂದು ಅಮಿತ್​ ಶಾ ಹೇಳಿದರು. ಹೀಗೆ ವಿಧಿ ವಿಜ್ಞಾನ ತಂಡಗಳ ಭೇಟಿ, ತನಿಖೆ ಕಡ್ಡಾಯಗೊಂಡರೆ ದೇಶದ 600ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಂದು ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪಿತವಾಗಬೇಕಾಗುತ್ತದೆ. ಚಿಕ್ಕಾದರೂ ಸರಿ, ಮೊಬೈಲ್​ ಫೊರೆನ್ಸಿಕ್​​ ವ್ಯಾನ್​​ಗಳ ರಚನೆಯಾಗಲೇಬೇಕಾಗುತ್ತದೆ ಎಂದು ತಿಳಿಸಿದರು.

ಹೀಗೆ ವಿಧಿ ವಿಜ್ಞಾನ ತಂಡಗಳ ಕಾರ್ಯವ್ಯಾಪ್ತಿ ಹೆಚ್ಚಿಸಿ, 600ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಪ್ರಯೋಗಾಲಯ ನಿರ್ಮಾಣಗೊಂಡರೆ, ಸುಮಾರು 30ರಿಂದ 40 ಸಾವಿರ ವಿಧಿ ವಿಜ್ಞಾನಿಗಳ ಅಗತ್ಯ ಬೀಳುತ್ತದೆ. ನಿರುದ್ಯೋಗ ಸಮಸ್ಯೆ ನೀಗುತ್ತದೆ..ಹಾಗೇ ಈ ವಿಭಾಗದಲ್ಲಿ ಕೌಶಲತೆ ಹೆಚ್ಚಿಸಲು ವಿಧಿ ವಿಜ್ಞಾನ ವಿಶ್ವವಿದ್ಯಾಲಯವನ್ನು ಸ್ಥಾಪಿಸುತ್ತಿದ್ದೇವೆ ಎಂದೂ ಅವರು ತಿಳಿಸಿದರು.

ಗೋವಾದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆಗೆ ಅಡಿಗಲ್ಲು ಸ್ಥಾಪನೆ ಮಾಡಲಿರುವ ಅಮಿತ್​ ಶಾ, ಗೋವಾದಲ್ಲಿ ಹೀಗೊಂದು ಯೂನಿರ್ವಸಿಟಿ ನಿರ್ಮಾಣ ಆಗುತ್ತಿರುವುದು ಯುವಜನರಿಗೆ ಸಿಕ್ಕ ಬಹುದೊಡ್ಡ ಕೊಡುಗೆಯಾಗಿದೆ. ಇಲ್ಲಿ ಸಾಮಾನ್ಯ ವಿಧಿ ವಿಜ್ಞಾನ, ವಿಧಿ ವಿಜ್ಞಾನ ರಸಾಯನ ಶಾಸ್ತ್ರ, ಟಾಕ್ಸಿಕಾಲಜಿ, ಜೈವಿಕ ತಂತ್ರಜ್ಞಾನ,ಬೆರಳಚ್ಚು, ಡಿಎನ್​ಎ ವಿಜ್ಞಾನ, ಹಣಕಾಸು ಅಪರಾಧಗಳ ತನಿಖೆ, ಸೈಬರ್-ಭದ್ರತೆ ವಿಶ್ಲೇಷಣೆ, ಡಿಜಿಟಲ್ ವಿಧಿ ವಿಜ್ಞಾನ ಮತ್ತು ವನ್ಯಜೀವಿ ವಿಧಿ ವಿಜ್ಞಾನ ಕೋರ್ಸ್​​​ಗಳು ಲಭ್ಯವಿದೆ. ಈ ಕೋರ್ಸ್​ಗಳಿಗೆ ಹೆಚ್ಚೆಚ್ಚು ವಿದ್ಯಾರ್ಥಿಗಳು ಸೇರಿಕೊಳ್ಳಿ. ನಿಮಗೆ ಖಂಡಿತ ಮುಂದೆ ಉದ್ಯೋಗಾವಕಾಶ ಇದೆ ಎಂದು ಅಮಿತ್​ ಶಾ ಕರೆ ನೀಡಿದರು.

- Advertisement -

Related news

error: Content is protected !!