Monday, June 30, 2025
spot_imgspot_img
spot_imgspot_img

6 ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಯುವತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -
vtv vitla
vtv vitla

ಆನೇಕಲ್: ಆರು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತ ಮಹಿಳೆ ಬೆಂಗಳೂರಿನ ಟೀಚರ್ಸ್ ಕಾಲೋನಿಯ ನಿವಾಸಿ ರಾಣಿ ಎನ್ನಲಾಗಿದೆ.

ಬೆಂಗಳೂರು ಹೊರವಲಯದ ಜಿಗಣಿ ಸಮೀಪದ ರಾಜಾಪುರ ನಿವಾಸಿಯಾಗಿರುವ ಯಶವಂತ್ ಹಾಗೂ ರಾಣಿ ಕಳೆದ ಆರು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಗೌರ್ಮೆಂಟ್ ಕೆಲಸ ಮಾಡಿಕೊಂಡಿದ್ದ ಯಶವಂತ್ ಆರು ತಿಂಗಳ ಹಿಂದೆ ರಾಣಿಯನ್ನು ಎರಡನೇ ಮದುವೆಯಾಗಿದ್ದ. ಆದರೆ, ರಾಣಿಯ ವೈವಾಹಿಕ ಜೀವನದ ಸುಮಧುರ ಕ್ಷಣ ಕೆಲವೇ ದಿನಗಳಿಗೆ ಸೀಮಿತವಾಗಿತ್ತು.

vtv vitla

ನಂತರದ ದಿನಗಳಲ್ಲಿ ರಾಣಿಗೆ ಯಶವಂತ್​​ ಕುಟುಂಬಸ್ಥರು ಚಿತ್ರಹಿಂಸೆ ನೀಡುತ್ತಿದ್ದರು. ತನ್ನ ಪಾಲಕರ ಬಳಿಯು ರಾಣಿ ಇದನ್ನು ಹೇಳಿಕೊಂಡಿದ್ದಳು ಎಂದು ತಿಳಿದುಬಂದಿದೆ. ಇದೀಗ ಮನೆಯ ಮಹಡಿಯಲ್ಲಿ ರಾಣಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಇದ್ದರೂ ಕೂಡ ಆಕೆಯ ಪತಿ ಹಾಗೂ ಮನೆಯವರು ನೋಡಲು ಕೂಡ ಬಂದಿಲ್ಲ. ಅಂತರ್ಜಾತಿ ವಿವಾಹ ಆಗಿದ್ದರಿಂದ ಪತಿಯ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಯುವತಿಯ ಪಾಲಕರು ಆರೋಪಿಸಿದ್ದಾರೆ.

ಇನ್ನು ಘಟನೆ ನಡೆದು ಅನೇಕ ಸಮಯಗಳಾದರೂ ಜಿಗಣಿ ಪೊಲೀಸರು ಆ್ಯಂಬ್ಯುಲೆನ್ಸ್ ಅನ್ನು ಸ್ಥಳಕ್ಕೆ ಕಳುಹಿಸದೆ ಬೇಜವಾಬ್ದಾರಿ ತೋರಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದರೆ ಸತ್ಯಾಂಶ ಹೊರಬರಲಿದೆ ಎಂದು ಒತ್ತಾಯಿಸಿದ್ದಾರೆ. ಪತಿ ಹಾಗೂ ಮನೆಯವರು ಕೊಲೆ ಮಾಡಿದ್ದಾರೆ ಎಂದು ಯುವತಿಯ ಪಾಲಕರು ಹಾಗೂ ಸಂಬಂಧಿಕರು ಗಂಭೀರ ಆರೋಪ ಮಾಡಿದ್ದಾರೆ.

- Advertisement -

Related news

error: Content is protected !!