- Advertisement -
- Advertisement -
ಕಾಸರಗೋಡು: ಕುಂಬಳೆ ಸಮೀಪದ ಬಂಬ್ರಾಣದಲ್ಲಿ ಯುವಕನೋರ್ವ ಆರು ಮಂದಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡವರನ್ನು ಬಂಬ್ರಾಣದ ಕಿರಣ್ (29), ಕುದ್ರೆಪ್ಪಾಡಿಯ ಗುರುರಾಜ್ (23), ನವೀನ್ (22) , ಧೀರಜ್ (21 , ಪ್ರವೀಣ್ (21) ಮತ್ತು ಚರಣ್ (23) ಎನ್ನಲಾಗಿದೆ.
ಕೋಳಿ ಅಂಕದ ಸ್ಥಳದಲ್ಲಿ ಉಂಟಾದ ಮಾತಿನ ಚಕಮಕಿಯೇ ಈ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಈ ಘಟನೆ ಕುರಿತು ಕುಂಬಳೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
- Advertisement -