- Advertisement -
- Advertisement -
ದೇವರ ದರ್ಶನಕ್ಕೆಂದು ಹೋಗಿ ಮರಳಿ ಊರಿಗೆ ಬರುವಾಗ ಸಿಮೆಂಟ್ ಟ್ಯಾಂಕರ್ ಹಾಗೂ ಕ್ರೂಸರ್ ಮಧ್ಯೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಐವರು ಮಹಿಳೆಯರು ಹಾಗೂ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಶುಕ್ರವಾರ ಸಂಜೆ ಅಕ್ಕಲಕೋಟ ತಾಲೂಕಿನ ಶಿರವಾಳ ವಾಡಿ ಹತ್ತಿರ ಭೀಕರ ಅಫಘಾತ ನಡೆದಿದೆ. 6 ಜನರು ಮೃತಪಟ್ಟಿದ್ದರೆ, 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಲಲಿತಾಬಾಯಿ ಮಹಾದೇವ ಬುಗ್ಗೆ (50), ರೋಹಿಣಿ ಗೋಪಾಲ ಪೂಜಾರಿ (40), ಸುಂದರಾಬಾಯಿ ಭರತಸಿಂಗ್ ರಜಪೂತ (55), ಸಾಹಿನಾಥ್ ಗೋವಿಂದ ಪೂಜಾರಿ (10) ಸಂಗೀತ ಮದನ್ ಗಾನೆ (35) ಛಾಯಾ ಹನುಮಾನ ನವರೆ (46) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
- Advertisement -