- Advertisement -
- Advertisement -






ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ ಬೆಳ್ತಂಗಡಿ ಮೂರು ಮಾರ್ಗದ ಬಳಿಯ ಎಂಆರ್ಎಫ್ ಎದುರಿನ ಕಟ್ಟಡವನ್ನು ತೆರವುಗೊಳಿಸುತ್ತಿದ್ದ ವೇಳೆ ಕಟ್ಟಡದ ಅಡಿ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.
ಮೃತರನ್ನು ಕಡಬ ಮೂಲದ ಝುಬೈರ್ (22) ಎಂದು ಗುರುತಿಸಲಾಗಿದೆ.ಕಟ್ಟಡ ತೆರವು ಕಾರ್ಯಾಚರಣೆಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವೇಳೆ ಕಟ್ಟಡದ ಅವಶೇಷಗಳು ಅವರ ಮೇಲೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದರು ಎನ್ನಲಾಗಿದೆ. ಬಳಿಕ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
- Advertisement -







