Tuesday, July 7, 2026
spot_imgspot_img
spot_imgspot_img

‘ಮಕ್ಕಳಿಗೆ ಹೊಡೆದು ಶಿಕ್ಷಣ ನೀಡುವುದನ್ನು ಒಪ್ಪಲಾಗದು’: ಶಿಕ್ಷಕಿ ವಿರುದ್ಧದ ಪ್ರಕರಣಕ್ಕೆ ತಡೆ ಇಲ್ಲ ಎಂದ ಹೈಕೋರ್ಟ್

- Advertisement -
- Advertisement -

ಬೆಂಗಳೂರು: ಯುಕೆಜಿ ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದ ಪ್ರಕರಣದಲ್ಲಿ ಶಿಕ್ಷಕಿಯೊಬ್ಬರ ವಿರುದ್ಧದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗೆ ತಡೆ ನೀಡಲು ನಿರಾಕರಿಸಿರುವ ಹೈಕೋರ್ಟ್, ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸಲಾಗದು ಎಂದು ತೀಕ್ಷವಾಗಿ ನುಡಿದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣಾ ಪ್ರಕ್ರಿಯೆ ರದ್ದು ಕೋರಿ ಸುರತ್ಕಲ್‌ನ ಹೋಲಿ ಫ್ಯಾಮಿಲಿ ಶಾಲೆಯ ಶಿಕ್ಷಕಿ ಸಿಸ್ಟರ್ ಆಶಾ ಕ್ರಾಸ್ಟಾ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.ಅರ್ಜಿ ವಿಚಾರಣೆಗೆ ಬರುತ್ತಿದ್ದಂತೆಯೇ ನ್ಯಾಯಪೀಠ ಅರ್ಜಿದಾರ ಪರ ವಕೀಲರನ್ನು ಕುರಿತು ಶಿಕ್ಷಕಿ ಏಕೆ ಮಗುವನ್ನು ಹೊಡೆದರು ಎಂದು ಪ್ರಶ್ನಿಸಿತು. ಅರ್ಜಿದಾರ ಪರ ವಕೀಲರು, ನಾವಲ್ಲ ಎಂದು ಹೇಳುತ್ತಿದ್ದಂತೆಯೇ ಕೋಪಗೊಂಡ ನ್ಯಾಯಮೂರ್ತಿಗಳು, ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ. ಇಂತಹ ನಡೆಯನ್ನು ನ್ಯಾಯಾಲಯ ಸಹಿಸುವುದಿಲ್ಲ ಎಂದು ತೀಕ್ಷ್ಮವಾಗಿ ಹೇಳಿದರು.ಬಳಿಕ ಪ್ರಕರಣ ಸಂಬಂಧ ಅರ್ಜಿದಾರರ ವಿರುದ್ಧದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಲು ನಿರಾಕರಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಸುರತ್ಕಲ್ ಪೊಲೀಸ್‌ ಠಾಣಾಧಿಕಾರಿ ಹಾಗೂ ದೂರುದಾರೆಯಾದ ಮಗುವಿನ ತಾಯಿ ಶಫ್ರೀನಾ ಅವರಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ:

ಸುರತ್ಕಲ್ ಪೊಲೀಸ್ ಠಾಣೆಗೆ 2026ರ ಜನವರಿ 31ರಂದು ದೂರು ನೀಡಿದ್ದ ಶಫ್ರೀನಾ, ನನ್ನ 6 ವರ್ಷದ ಮಗಳು ಸುರತ್ಕಲ್‌ನ ಹೋಲಿ ಫ್ಯಾಮಿಲಿ ಶಾಲೆಯಲ್ಲಿ ಯುಕೆಜಿ ವ್ಯಾಸಂಗ ಮಾಡುತ್ತಿದ್ದು ಈ ಹಿಂದೆ ತರಗತಿಯಲ್ಲಿ ಮಗಳಿಗೆ ಶಿಕ್ಷಕಿ ಆಶಾ ಕ್ರಾಸ್ಟಾ ಹೊಡೆದಿದ್ದರು.

ಈ ವಿಚಾರವನ್ನು ಶಾಲೆಯ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಮಾತುಕತೆ ನಡೆಸಿ ಮುಕ್ತಾಯಗೊಳಿಸಿದ್ದರು. ಮುಂದೆ ಈ ರೀತಿ ನಡೆಯುವುದಿಲ್ಲ ಎಂದು ಶಿಕ್ಷಕಿ ಆಶಾ ಕ್ರಾಸ್ನಾ ಅವರೂ ತಿಳಿಸಿದ್ದರು. ಹೀಗಿದ್ದರೂ, 2026ರ ಜನವರಿ 30ರಂದು ನನ್ನ ಮಗಳಿಗೆ ಕೋಲಿನಿಂದ ಹಲ್ಲೆ ಮಾಡಿದ್ದಾರೆ. ಆದ್ದರಿಂದ, ಶಿಕ್ಷಕಿ ಆಶಾ ಕ್ರಾಸ್ವಾ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿದ್ದರು. ಈ ದೂರು ಆಧರಿಸಿ ಪೊಲೀಸರು, ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 75 (ಮಕ್ಕಳ ಮೇಲೆ ಕ್ರೌರ್ಯ) ಹಾಗೂ ಭಾರತೀಯ ನ್ಯಾಯ (ಬಿಎನ್‌ಎಸ್) ಸೆಕ್ಷನ್ 118(1)ರ (ಹೊಡೆದು ದೈಹಿಕ ನೋವು ಅಥವಾ ಗಾಯವನ್ನು ಉಂಟುಮಾಡುವುದು) ಅಡಿ ಎಫ್‌ಐಆ‌ರ್ ದಾಖಲಿಸಿದ್ದರು.

ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು, ವಿಚಾರಣಾ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣ ಮಂಗಳೂರಿನ 2ನೇ ಹೆಚ್ಚುವರಿ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿದೆ.

- Advertisement -

Related news

error: Content is protected !!