Sunday, September 6, 2026
spot_imgspot_img
spot_imgspot_img

ಅನಿವಾಸಿ ಕನ್ನಡಿಗರಿಗೆ SIR ನೋಟಿಸ್: ಖುದ್ದು ಹಾಜರಾತಿಗೆ ವಿನಾಯಿತಿ ನೀಡಲು ಮನವಿ

- Advertisement -
- Advertisement -

ಮಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿ ನೋಟಿಸ್ ಪಡೆದಿರುವ ಅನಿವಾಸಿ ಕನ್ನಡಿಗರಿಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ, ವೀಡಿಯೊ ಕಾನ್ಫರೆನ್ಸ್ ಮೂಲಕ ದೃಢೀಕರಣಕ್ಕೆ ಅವಕಾಶ ಕಲ್ಪಿಸುವಂತೆ ಕರ್ನಾಟಕ NRI ಫೋರಂ ಸೌದಿ ಅರೇಬಿಯಾ ಸಚಿವ ಯು.ಟಿ.ಖಾದರ್ ಅವರಿಗೆ ಮನವಿ ಸಲ್ಲಿಸಿದೆ.

NRI ಫೋರಂ ಅಧ್ಯಕ್ಷ ಝಕರಿಯಾ ಜೋಕಟ್ಟೆ, ಶೇಖ್ ಕರ್ನಿರೆ ಹಾಗೂ ಕಾರ್ಯಕಾರಿ ಸಮಿತಿಯ ನಿರ್ದೇಶನ ಮತ್ತು ಮಾರ್ಗದರ್ಶನದಲ್ಲಿ ನಿಯೋಗವು ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.SIR ಪ್ರಕ್ರಿಯೆಯಲ್ಲಿ ನೋಟಿಸ್ ಪಡೆದಿರುವ ಕೆಲವು ಅನಿವಾಸಿ ಭಾರತೀಯರು ದೃಢೀಕರಣಕ್ಕಾಗಿ ಚುನಾವಣಾ ಆಯೋಗದ ಮುಂದೆ ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ. ಇದರಿಂದ ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ಉದ್ಯೋಗದಲ್ಲಿರುವ ಸಾವಿರಾರು ಅನಿವಾಸಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಫೋರಂ ತಿಳಿಸಿದೆ.

ವಿದೇಶದಿಂದ ಕೇವಲ SIR ದೃಢೀಕರಣಕ್ಕಾಗಿ ಕರ್ನಾಟಕಕ್ಕೆ ಆಗಮಿಸುವುದು ದುಬಾರಿಯಾಗಿದ್ದು, ಅಲ್ಪಾವಧಿಯ ಸೂಚನೆಯ ಮೇರೆಗೆ ಉದ್ಯೋಗಿಗಳಿಗೆ ರಜೆ ಪಡೆಯುವುದೂ ಕಷ್ಟಕರವಾಗಿದೆ. ಹೀಗಾಗಿ ಕರ್ನಾಟಕ ಸರ್ಕಾರವು ಈ ವಿಚಾರವನ್ನು ಮುಖ್ಯ ಚುನಾವಣಾಧಿಕಾರಿ ಹಾಗೂ ಭಾರತೀಯ ಚುನಾವಣಾ ಆಯೋಗದ ಗಮನಕ್ಕೆ ತರಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.ಕೇರಳ ಮಾದರಿಯಲ್ಲಿ ವೀಡಿಯೊ ಕಾನ್ಫರೆನ್ಸ್ ಮೂಲಕ ದೃಢೀಕರಣಕ್ಕೆ ಅವಕಾಶ ನೀಡಬೇಕು. ಅಗತ್ಯವಿದ್ದಲ್ಲಿ ಪಾಸ್‌ಪೋರ್ಟ್ ಪ್ರತಿಯನ್ನು ಸಲ್ಲಿಸುವ ಮೂಲಕವೂ ಪ್ರಕ್ರಿಯೆ ಪೂರ್ಣಗೊಳಿಸಲು ಅವಕಾಶ ಕಲ್ಪಿಸಬೇಕು ಎಂದು ಫೋರಂ ಒತ್ತಾಯಿಸಿದೆ.

ಮನವಿ ಸ್ವೀಕರಿಸಿದ ಸಚಿವ ಯು.ಟಿ.ಖಾದರ್, ಈ ಕುರಿತು ಕರ್ನಾಟಕ ಚುನಾವಣಾ ಆಯೋಗದೊಂದಿಗೆ ಚರ್ಚಿಸಿ, ಅನಿವಾಸಿ ಕನ್ನಡಿಗರಿಗೆ ಅಗತ್ಯವಿರುವ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.ನಿಯೋಗದಲ್ಲಿ NRI ಫೋರಂ ಸೌದಿ ಅರೇಬಿಯಾದ ಸಲಹೆಗಾರ ಫಾರೂಕ್ ಮುಲ್ಕಿ, ಖಜಾಂಚಿ ಅಯಾಝ್ ಕೈಕಂಬ, ಮುಖ್ಯ ಸಂಯೋಜಕರಾದ ರಫೀಕ್ ಕೆ.ಎಚ್., ಅಬ್ದುಲ್ ಹಮೀದ್ ಆರಮ್ಯಾಕ್ಸ್ ಹಾಗೂ ಮುಸ್ತಾಕ್ ಎಂ.ಎಚ್. ಉಪಸ್ಥಿತರಿದ್ದರು.

- Advertisement -

Related news

error: Content is protected !!