ಆಜಾದಿ ಕಾ ಅಮೃತ್ ಮಹೋತ್ಸವ ಪ್ರಯುಕ್ತ ಇಂದು (ಆಗಸ್ಟ್ 15) ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಿರುವುದು ಇದು 9ನೇ ಬಾರಿ. ಈ ಬಾರಿ ಭಾರತ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿದ್ದು ಇದು ಹೆಚ್ಚಿನ ಮಹತ್ವ ಹೊಂದಿದೆ.
ದೇಶದಾದ್ಯಂತ ಹಬ್ಬದ ವಾತಾವರಣ ಮನೆ ಮಾಡಿದ್ದು ಎಲ್ಲೆಡೆ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿವೆ. ಶಾಲಾ ಕಾಲೇಜು ಸೇರಿದಂತೆ ಇತರ ಸಂಸ್ಥೆ, ಕಚೇರಿಗಳಲ್ಲಿ ಧ್ವಜಾರೋಹಣ ನಡೆಯಲಿದ್ದು, ಸ್ವಾತಂತ್ರ್ಯದ ಮಹತ್ವ, ಹೋರಾಟವನ್ನು ನೆನಪಿಸುವ ಹಲವಾರು ಕಾರ್ಯಕ್ರಮಗಳು ನಡೆಯಲಿವೆ.
ಹೆಚ್ಚಿನ ದೇಶಗಳಂತೆ ಭಾರತವು ಕೊವಿಡ್ ಸಾಂಕ್ರಾಮಿಕದ ಛಾಯೆಯಿಂದ ಹೊರಬರುತ್ತಿರುವ ಸಮಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದೆ. ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸರ್ಕಾರವು ‘ಹರ್ ಘರ್ ತಿರಂಗ’ ಸೇರಿದಂತೆ ಹಲವಾರು ಅಭಿಯಾನಗಳನ್ನು ನಡೆಸಿತ್ತು.