- Advertisement -
- Advertisement -


ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡಗರವಳ್ಳಿ-ಯಡಕುಮೇರಿ ನಡುವಿನ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿ ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದಾಗಿದೆ. ಬೆಂಗಳೂರು-ಹಾಸನ-ಮಂಗಳೂರು ಮಾರ್ಗ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ ಬಂದ್ ಆಗಿದೆ.
ಕಿಲೋ ಮೀಟರ್ ನಂಬರ್ 63ರಲ್ಲಿ ಹಳಿಯ ಮೇಲೆ ಮಣ್ಣು ಕುಸಿತವಾಗಿದೆ. ಸದ್ಯ ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿಗಳು ದೌಡಾಸಿದ್ದು, ರೈಲ್ವೆ ಇಲಾಖೆ ಅಧಿಕಾರಿಗಳಿಂದ ರೈಲು ಮಾರ್ಗ ಬದಲಿಸಲಾಗಿದೆ ಎಂಬ ಮಾಹಿತಿ ಲಭಿಸಿದೆ.
- Advertisement -








