Sunday, June 29, 2025
spot_imgspot_img
spot_imgspot_img

ಅಪಘಾತವಾಗಿ ಒಂದು ಗಂಟೆ ಕಳೆದರೂ ಬಾರದ ಅಂಬುಲೆನ್ಸ್ ; ನರಳಾಡಿ ಪ್ರಾಣ ಬಿಟ್ಟ ಯುವಕ

- Advertisement -
- Advertisement -

ಹಾಸನ: ಅಪಘಾತವಾಗಿ ಒಂದು ಗಂಟೆ ಕಳೆದರೂ ಸರಿಯಾದ ಸಮಯಕ್ಕೆ ಅಂಬುಲೆನ್ಸ್ ಬರದೇ ಯುವಕನೊಬ್ಬ ನಡು ರಸ್ತೆಯಲ್ಲೇ ನರಳಾಡಿ ಪ್ರಾಣ ಬಿಟ್ಟಿರುವ ದಾರುಣ ಘಟನೆ ಹಾಸನದ ಕಲ್ಕೆರೆ ಗ್ರಾಮದ ಬಳಿ ನಡೆದಿದೆ.

ಆನಂದ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೃತಪಟ್ಟ ಯುವಕ. ಬೇಲೂರು ಕಡೆಯಿಂದ ಹಾಸನದ ಕಡೆಗೆ ತನ್ನ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಪರಿಚಿತ ವಾಹನವೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಆನಂದ್ ತೀವ್ರವಾಗಿ ಗಾಯಗೊಂಡು ರಸ್ತೆ ನಡುವೆ ರಕ್ತದ ಮಡುವಿನಲ್ಲಿ ಬಿದ್ದಿದ್ದ.

ಬಳಿಕ ಸ್ಥಳೀಯರು ಹಾಗೂ ಅದೇ ದಾರಿಯಲ್ಲಿ ಪ್ರಯಾಣಿಸುತ್ತಿದ್ದವರು ಅಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ. ಆದರೆ ಅಪಘಾತ ಸಂಭವಿಸಿ ಒಂದು ಗಂಟೆ ಕಳೆದರೂ ಅಂಬುಲೆನ್ಸ್ ಬರದೇ ಹೋಗಿದ್ದು, ಅಷ್ಟರಲ್ಲಾಗಲೇ ಯುವಕ ನರಳಾಗಿ ಪ್ರಾಣ ಬಿಟ್ಟಿದ್ದಾನೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದ್ದು, ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

- Advertisement -

Related news

error: Content is protected !!