Sunday, June 29, 2025
spot_imgspot_img
spot_imgspot_img

ನೂತನ ಸ್ಪೀಕರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್; ಶ್ರೀರಾಮಸೇನೆಯ ನಾಯಕನ ವಿರುದ್ಧ ದೂರು

- Advertisement -
- Advertisement -

ಚಿಕ್ಕಮಗಳೂರು: ನೂತನ ಸ್ಪೀಕರ್ ಯುಟಿ ಖಾದರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಶ್ರೀರಾಮಸೇನೆಯ ನಾಯಕನ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ.

ಶ್ರೀರಾಮಸೇನೆಯ ಮುಖಂಡ ಪ್ರೀತೇಶ್ ಎಂಬವರು ಯುಟಿ ಖಾದರ್ ಬಗ್ಗೆ ಅವಹೇಳನಕಾರಿಯಾಗಿ ವ್ಯಂಗ್ಯ ಮಾಡಿದ್ದಾರೆ. ಅಲ್ಲದೆ ಕೋಮು ದ್ವೇಷ ಹಾಗೂ ಜನಾಂಗದ ನೋವಿಗೆ ಪ್ರೀತೇಶ್ ಕಾರಣರಾಗಿದ್ದಾರೆ. ಈ ರೀತಿ ಸಂವಿಧಾನಾತ್ಮಕ ಹುದ್ದೆಗೆ ಅಗೌರವ ತೋರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಕ್ಷದ ಐಟಿ ಸೆಲ್‍ನ ಜಿಲ್ಲಾ ಕಾರ್ಯದರ್ಶಿ ಎಂಎಲ್‍ಎ ಮಂಜು ಅವರು ದೂರು ನೀಡಿದ್ದಾರೆ.

`ಸದನದಲ್ಲಿ ಮಾನ್ಯ ಸಭಾಧ್ಯಕ್ಷರೇ ಅನ್ನಬೇಕಾ? ಸಾಬಾಧ್ಯಕ್ಷರೇ ಅನ್ನಬೇಕಾ?’ ಎಂದು ಶ್ರೀರಾಮ ಸೇನೆ ಮುಖಂಡ ಬರೆದುಕೊಂಡಿದ್ದರು. ಅಲ್ಲದೆ ಯುಟಿ ಖಾದರ್ ಅವರ ಹೆಸರಿನಲ್ಲಿ ಟ್ಯಾಗ್ ಬಳಸಿ ಪೋಸ್ಟ್ ಮಾಡಲಾಗಿತ್ತು.

ಈ ಸಂಬಂಧ ಚಿಕ್ಕಮಗಳೂರು ನಗರದ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುವ ಭರವಸೆ ನೀಡಿದ್ದಾರೆ.

- Advertisement -

Related news

error: Content is protected !!