- Advertisement -
- Advertisement -


ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ಹಾಗೂ COMMSCOPE ಸಂಸ್ಥೆಗಳ ಸಹಯೋಗದಿಂದ ಸುಮಾರು 20 ಲಕ್ಷ ರೂ ವೆಚ್ಚದಲ್ಲಿ ನೂತನ ವಿಜ್ಞಾನ ಕೇಂದ್ರ ಹಾಗೂ ಪ್ರಯೋಗಾಲಯಗಳನ್ನು ನಿರ್ಮಿಸಲಾಗಿದೆ. ಇದರ ಉದ್ಘಾಟನೆಯು ಜೂ.10ರಂದು ಸಂಸ್ಥೆಯ ಸುವರ್ಣ ರಂಗ ಮಂದಿರದಲ್ಲಿ ನಡೆಯಲಿದೆ.
COMMSCOPE ಸಂಸ್ಥೆಯ ಭಾರತ ಮುಖ್ಯಸ್ಥ ನವೀನ್ ಜಯಪ್ರಕಾಶ್ ಉದ್ಘಾಟಿಸಲಿದ್ದಾರೆ. ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ, ದ.ಕ ಜಿಲ್ಲಾ ಸಾಕ್ಷರತಾ ಮತ್ತು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಿ.ಆರ್. ನಾಯಕ್, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ. ಹಾಗೂ ವೀರೇಂದ್ರ ಸಿಂಗ್ ಉಪಸ್ಥಿತರಿರುವರು. ಡಾ| ಶ್ರೀಶ ಬೈಪದವು ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಂದರ್ಭದಲ್ಲಿಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಚೀಲ ಹಾಗೂ ಪುಸ್ತಕಗಳನ್ನು ವಿತರಿಸಲಾಗುವುದು ಎಂದು ಸಂಸ್ಥೆಯ ಆಡಳಿತಾಧಿಕಾರಿ ಪ್ರಶಾಂತ್ ಚೊಕ್ಕಾಡಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- Advertisement -