Saturday, June 28, 2025
spot_imgspot_img
spot_imgspot_img

ಹೆಬ್ರಿ: ಕಾರು-ಬಸ್‌ ನಡುವೆ ಅಪಘಾತ; ಇಬ್ಬರು ಶಿಕ್ಷಕರು ಮೃತ್ಯು..!!

- Advertisement -
- Advertisement -
vtv vitla

ಹೆಬ್ರಿ: ಕಾರು ಮತ್ತು ಬಸ್ಸು ಡಿಕ್ಕಿ ಹೊಡೆದು ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟ ಘಟನೆ ಸೀತಾನದಿ ಜಕ್ಕನಮಕ್ಕಿ ಬಳಿ ನಡೆದಿದೆ.ಅಪಘಾತದಲ್ಲಿ ಇನ್ನೋರ್ವ ಶಿಕ್ಷಕ ಗಂಭೀರ ಗಾಯಗೊಂಡಿದ್ದಾರೆ.

ಮೃತರನ್ನು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮ ಶೇಖರ ಎಂದು ಗುರುತಿಸಲಾಗಿದೆ.

ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ನಡೆದಿದೆ. ಇನ್ನು ಗಂಭೀರ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಂಬುಲೆನ್ಸ್ ಸಿಗದೆ ಯಾರು ಸಹಾಯಕ್ಕೆ ಬಾರದೆ ಇರುವುದನ್ನು ಗಮನಿಸಿ ಈ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಮೋದ್ ಎಂಬವರು ನಾಲ್ವರನ್ನು ತನ್ನ ಕಾರಿಗೆ ಹಾಕಿಕೊಂಡು ಬಂದು ಹೆಬ್ರಿ ಸರಕಾರಿ ಆಸ್ಪತ್ರೆ ಸೇರಿಸಿದ್ದಾರೆ.

- Advertisement -

Related news

error: Content is protected !!