Sunday, June 29, 2025
spot_imgspot_img
spot_imgspot_img

ಕಾಸರಗೋಡು: ಬೈಕ್‌ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ದಾರುಣ ಸಾವು

- Advertisement -
- Advertisement -

ಕಾಸರಗೋಡು: ಬೈಕ್‌ ಅಪಘಾತದಲ್ಲಿ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಕುಂಬಳೆ ಸಮೀಪದ ಪೆರ್ವಾಡ್‌ ರಾಷ್ಟ್ರೀಯ ಹೆದ್ದಾರಿ ನಡೆದಿದೆ.

ಶಿರಿಬಾಗಿಲು ನೀರಾಳ ನಿವಾಸಿ ಸದಾಶಿವ ಶೆಟ್ಟಿ- ಜಯಲಕ್ಷ್ಮಿ ದಂಪತಿಯ ಪುತ್ರ ಪರಿಯ ಪೊಳಲಿಯಲ್ಲಿ ತೃತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಆಕಾಶ್ ಶೆಟ್ಟಿ, (19) ಮೃತ ದುರ್ದೈವಿ.

ಆನಕಲ್ಲಿನಲ್ಲಿರುವ ಸ್ನೇಹಿತನ ಮನೆಗೆ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ಬೈಕ್ ಚಲಾಯಿಸುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಯತ್ನಿಸಿದಾಗ ನಿಯಂತ್ರಣ ತಪ್ಪಿ ಬೈಕ್‌ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರವಾಗಿ ಗಾಯಗೊಂಡ ಆಕಾಶ್‌ನನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದರು.

ಈ ಬಗ್ಗೆ ಕುಂಬಳೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!