- Advertisement -
- Advertisement -
ಮಂಗಳೂರು: ದ್ವಿಚಕ್ರ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಪದವಿನಂಗಡಿ ಬಳಿ ನಡೆದಿದೆ. ಮೃತರನ್ನು ಪಚ್ಚನಾಡಿ ನಿವಾಸಿಗಳಾದ ಚಿರಾಗ್ ಮತ್ತು ಪವನ್ ಎಂದು ಗುರುತಿಸಲಾಗಿದೆ.
ಯುವಕರು ದ್ವಿಚಕ್ರ ವಾಹನದಲ್ಲಿ ಮನೆಯ ಕಡೆ ತೆರಳುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆಯಿತೆನ್ನಲಾಗಿದೆ. ಘಟನೆಯಿಂದ ಇಬ್ಬರಿಗೂ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -