- Advertisement -
- Advertisement -
ಶಿಕ್ಷಣವು ವ್ಯಕ್ತಿ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಗುಣಾತ್ಮಕ ಶಿಕ್ಷಣ ನೀಡುವುದು ನಮ್ಮ ಮೊದಲ ಆದ್ಯತೆ. ಈ ದೃಷ್ಟಿಯಿಂದ ಪೋಷಕರು ಶಾಲೆಯೊಂದಿಗೆ ಕೈ ಜೋಡಿಸಬೇಕು ಎಂದು ಕುಳ-ಕುಂಡಡ್ಕ ಗುಣಶ್ರೀ ವಿದ್ಯಾಲಯದ ಅಧ್ಯಕ್ಷರು ಹಾಗೂ ಮಾಜಿ ಸಚಿವ ನಾಗರಾಜ ಶೆಟ್ಟಿ ತಿಳಿಸಿದರು.
ಶಿಕ್ಷಕ -ರಕ್ಷಕ ಸಭೆಯಲ್ಲಿ ಪಾಲ್ಗೊಂಡ ಪೋಷಕರು ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಚಾಲಕ ವೇಣುಗೋಪಾಲ ಶೆಟ್ಟಿ ಮರುವಾಳ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು .
ಮುಖ್ಯ ಗುರುಗಳಾದ ರಾಜಾರಾಮ ವರ್ಮ ಪ್ರಾಸ್ತಾವಿಕವಾಗಿ ಮಾತನಾಡಿ ಶೈಕ್ಷಣಿಕ ಯೋಜನೆಗಳ ಬಗ್ಗೆ ತಿಳಿಸಿದರು. ಶಿಕ್ಷಕಿ ಚೈತ್ರ ಲೋಕೇಶ್ ಸ್ವಾಗತಿಸಿದರು. ಕಾವ್ಯಶ್ರೀ ಧನ್ಯವಾದ ಸಲ್ಲಿಸಿದರು. ವಾಣಿಶ್ರೀ, ಶ್ರೇಯಾ ರೈ, ಕಾವ್ಯಶ್ರೀ ಎಂ , ವನಜಾ ಆಶಯ ಗೀತೆಯನ್ನು ಹಾಡಿದರು. ರೇಣುಕ ಕಾರ್ಯಕ್ರಮ ನಿರೂಪಿಸಿದರು.
- Advertisement -