- Advertisement -
- Advertisement -



ಟ್ರೆಕ್ಕಿಂಗ್ ಬಂದಿದ್ದ ಪ್ರವಾಸಿಗ ಯುವಕ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ರಕ್ಷಿತ್ (27) ಹೃದಯಾಘಾತಕ್ಕೆ ಮೃತಪಟ್ಟ ಯುವಕನಾಗಿದ್ದಾನೆ. ಮೈಸೂರು ಮೂಲದ ಏಳು ಯುವಕರ ತಂಡ ಟ್ರೆಕ್ಕಿಂಗ್ ಗೆ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ರಕ್ಷಿತ್ ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಯ ಗಡಿ ಪ್ರದೇಶ ನೇತ್ರಾವತಿ ಪೀಕ್ ಸ್ಪಾಟ್ ನಿಂದ ಮೃತದೇಹವನ್ನು ಪೊಲೀಸರು ಕಳಸಕ್ಕೆ ತಂದಿದ್ದಾರೆ.
- Advertisement -