Saturday, June 28, 2025
spot_imgspot_img
spot_imgspot_img

ಉಪ್ಪಿನಂಗಡಿ: ಜ್ವರದಿಂದ ಬಳಲುತ್ತಿದ್ದ ಎಂಟು ತಿಂಗಳ ಮಗು ಮೃತ್ಯು; ಗಂಡನ ವಿರುದ್ಧ ದೂರು

- Advertisement -
- Advertisement -

ಉಪ್ಪಿನಂಗಡಿ: ಜ್ವರದಿಂದ ಬಳಲುತ್ತಿದ್ದ ಎಂಟು ತಿಂಗಳ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ತನ್ನ ಮಗುವಿನ ಸಾವಿಗೆ ಪತಿಯೇ ಕಾರಣ ಎಂದು ಪತ್ನಿ ಆರೋಪಿಸಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

34 ನೆಕ್ಕಿಲಾಡಿ ಗ್ರಾಮದ ಸಂತ್ಯಡ್ಕ ನಿವಾಸಿಗಳಾದ ಶ್ರೀಧರ ನಾಯ್ಕ ಮತ್ತು ಚಿತ್ರಾ ದಂಪತಿಯ ಪುತ್ರ ಎಂಟು ತಿಂಗಳ ಮಗು ಜೀವಿತ್ ತೀವ್ರ ಜ್ವರದ ಕಾರಣ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಜುಲೈ 1 ರಂದು ಮಗು ಸಾವನ್ನಪ್ಪಿದೆ. ಜುಲೈ 2ರಂದು ಚಿತ್ರಾ ತನ್ನ ಮಗುವಿನ ಮರಣದ ಕುರಿತು ಸಂಶಯ ವ್ಯಕ್ತಪಡಿಸಿ ತನ್ನ ಗಂಡನ ಮೇಲೆ ದೂರು ದಾಖಲಿಸಿದ್ದಾರೆ.

ಮೃತ ಮಗು ಜೀವಿತ್‌ನ ತಾಯಿ ಚಿತ್ರಾ ತಮ್ಮ ದೂರಿನಲ್ಲಿ, “ಜ್ವರದಿಂದ ಬಳಲುತ್ತಿದ್ದ ಮಗುವಿನೊಂದಿಗೆ ನಾನು ನನ್ನ ತವರು ಮನೆಗೆ ಹೋಗುತ್ತೇನೆ ಎಂದು ನನ್ನ ಗಂಡನಿಗೆ ಹೇಳಿದಾಗ ಪತಿ ಶ್ರೀಧರ ಕೋಪಗೊಂಡು ಜಗವಾಡಿ ನನ್ನನ್ನು ತಳ್ಳಿದ್ದು, ಈ ವೇಳೇ ನಾನು ಮಗುವಿನೊಂದಿಗೆ ಕೆಳಗೆ ಬಿದ್ದೆ. ನಂತರ ಮಗುವಿನ ಜ್ವರ ಹೆಚ್ಚಾಯಿತು. ನನ್ನ ಪತಿ ನನ್ನನ್ನು ತಳ್ಳಿದಾಗ ಬಿದ್ದ ಕಾರಣ ನನ್ನ ಮಗುವಿನ ಸಾವಿಗೆ ಕಾರಣವಾಗಿರಬಹುದು” ಎಂದು ದೂರಿದ್ದಾರೆ.

ಪೊಲೀಸರು ಶ್ರೀಧರ ನಾಯ್ಕ ಅವರನ್ನು ವಿಚಾರಿಸಿದ್ದು ಮಗುವಿನ ಮರಣೋತ್ತರ ಪರೀಕ್ಷೆಯ ವರದಿ ಇನ್ನಷ್ಟೇ ಬಿಡುಗಡೆ ಬರಬೇಕಾಗಿದೆ.

- Advertisement -

Related news

error: Content is protected !!