Sunday, June 29, 2025
spot_imgspot_img
spot_imgspot_img

ಉಡುಪಿ: ದ್ವಿಚಕ್ರ ವಾಹನ ಸಹಿತ ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

- Advertisement -
- Advertisement -

ಉಡುಪಿ: ಕರಾವಳಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಕೆದೂರು ಗ್ರಾಮದಲ್ಲಿ ನಡೆದಿದೆ.

ಕೆದೂರು ಗ್ರಾಮ ಪಂಚಾಯತ್ ಮಲ್ಯಾಡಿ ಗ್ರಾಮದ ನಿವಾಸಿ ದಿನಕರ ಶೆಟ್ಟಿ (46) ಆಕಸ್ಮಿಕವಾಗಿ ಕೆರೆಗೆ ಜಾರಿಬಿದ್ದು ದಾರುಣವಾಗಿ ಮೃತಪಟ್ಟ ವ್ಯಕ್ತಿ.

ತೆಕ್ಕಟ್ಟೆ ಸಮೀಪದ ಮಣೂರಿನ ಹಳ್ಳಿಮನೆ ಹೋಟೆಲ್ ನಲ್ಲಿ ಕ್ಯಾಶಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ದಿನಕರ ಶೆಟ್ಟಿ ಅವರು ಎಂದಿನಿಂದ ಕೆಲಸ ಮುಗಿಸಿ ತನ್ನ ಮ್ಯಾಸ್ಟ್ರೋ ವಾಹನದ ಮೂಲಕ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ತಡರಾತ್ರಿ 11.30ರ ಸುಮಾರಿಗೆ ಮನೆಯ ಅನತಿ ದೂರದಲ್ಲಿರುವ ದೇವರ ಕೆರೆಗೆ ಆಕಸ್ಮಿಕವಾಗಿ ವಾಹನ ಸಹಿತ ಆಯತಪ್ಪಿ ಬಿದ್ದಿದ್ದಾರೆ ಎಂದು ಹೇಳಲಾಗಿದೆ.

ಇದೇ ಸಂದರ್ಭದಲ್ಲಿ ಪತ್ನಿ ಶೀಲಾ ಶೆಟ್ಟಿ ಅವರು ತನ್ನ ಗಂಡ ತಡರಾತ್ರಿಯಾದರೂ ಕೂಡಾ ಮನೆಗೆ ಬಾರದೇ ಇರುವ ಬಗ್ಗೆ ಅನುಮಾನಗೊಂಡು, ಪರಿಸರದವರಿಗೆ ಮಾಹಿತಿ ನೀಡಿ ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಕೋಟ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬಂದಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ, ಕೆರೆಯಲ್ಲಿ ಅಪಾರ ಪ್ರಮಾಣದಲ್ಲಿ ಮಳೆನೀರು ಸಂಗ್ರಹವಾಗಿರುವ ಪರಿಣಾಮ ರಕ್ಷಣಾ ಕಾರ್ಯಕ್ಕೆ ಮಲ್ಪೆಯ ಈಶ್ವರ್, ಜೀವನ ಮಿತ್ರದ ನಾಗರಾಜ್ ಹಾಗೂ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ನಿರತರಾದರು.

- Advertisement -

Related news

error: Content is protected !!