Friday, June 27, 2025
spot_imgspot_img
spot_imgspot_img

ಸುಳ್ಯ: ಕಾಲು ಸಂಕ ದಾಟುತ್ತಿರುವ ವೇಳೆ ದುರಂತ; ಆಯತಪ್ಪಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

- Advertisement -
- Advertisement -

ಸುಳ್ಯ: ವ್ಯಕ್ತಿಯೊಬ್ಬರು ಕಾಲು ಸೇತುವೆ ದಾಟುತ್ತಿರುವ ಸಂದರ್ಭದಲ್ಲಿ ಆಯ ತಪ್ಪಿ ಕೆಳಕ್ಕೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಅಲೆಟ್ಟಿಯ ಕೂರ್ನಡ್ಕದಲ್ಲಿ ನಡೆದಿದೆ.

ನೀರು ಪಾಲಾದ ವ್ಯಕ್ತಿಯನ್ನು ಕೇರಳ ಮೂಲದವರು ಎಂದು ಹೇಳಲಾಗುತ್ತಿದೆ. ತೋಟದಲ್ಲಿ ‌ಕೂಲಿ ಕೆಲಸ ಮುಗಿಸಿ ಹಿಂತಿರುಗುವ ವೇಳೆಯಲ್ಲಿ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸುಳ್ಯದ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

Related news

error: Content is protected !!