Tuesday, June 9, 2026
spot_imgspot_img
spot_imgspot_img

ಕಾರ್ ಟಿಪ್ಪರ್ ಮಧ್ಯೆ ಭೀಕರ ಅಪಘಾತ

- Advertisement -
- Advertisement -

ಉಡುಪಿ : ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಕಾರ್​ ಮತ್ತು  ಬೆಳ್ಮಣ್ಣಿನಿಂದ ಬೈಕಂಬಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್ ನಡುವೆ ಅಪಘಾತ  ಸಂಭವಿಸಿದೆ.

ಹಿಂಭಾಗಕ್ಕೆ ಕಾರ್ ಡಿಕ್ಕಿ ಹೊಡೆದ ವಿಚಾರ ತಿಳಿಯುತ್ತಿದ್ದಂತೆ ಚಾಲಕ ಟಿಪ್ಪರ್ ವೇಗವನ್ನು ಮತ್ತಷ್ಟು ಹೆಚ್ಚಿಸಿದ್ದಾನೆ. ಆದರೆ ಕಾರು ಟಿಪ್ಪರ್ ಹಿಂಭಾಗದಲ್ಲಿ ಸಿಲುಕಿರುವ ವಿಚಾರ ಚಾಲಕನಿಗೆ ತಿಳಿದಿರಲಿಲ್ಲ. ಸಾರ್ವಜನಿಕರು ಟಿಪ್ಪರ್ ನಿಲ್ಲಿಸಲು ಬೆನ್ನತ್ತಿದ್ದಾರೆ. ಆದರೆ ಹೊಡೆತ ಬೀಳಬಹುದೆಂಬ ಭಯದಿಂದ ಟಿಪ್ಪರ್ ಚಾಲಕ ನಿಲ್ಲಿಸದೆ ಕಾರನ್ನು ಕಿಲೋಮೀಟರ್ ದೂರದವರೆಗೆ ಎಳೆದೊಯ್ದಿದ್ದಾನೆ.

ಕೊನೆಗೆ ಸಾರ್ವಜನಿಕರು ಟಿಪ್ಪರ್​ ನಿಲ್ಲಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಕಾರಿನಲ್ಲಿದ್ದ ಮಹಿಳೆ ಸೇರಿದಂತೆ ಮೂವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಟಿಪ್ಪರನ್ನು ವಶಕ್ಕೆ ಪಡೆದ ಪಡುಬಿದ್ರಿ ಪೊಲೀಸರು, ಗಾಯಾಳುಗಳಿಂದ ಮಾಹಿತಿ ಪಡೆದು ಪ್ರಕರಣ ದಾಖಲಿಸಲು ನಿರ್ಧರಿಸಿದ್ದಾರೆ.

- Advertisement -

Related news

error: Content is protected !!