- Advertisement -
- Advertisement -

ಉಡುಪಿ: ಕರಾವಳಿಯಲ್ಲಿ ಮತ್ತೊಮ್ಮೆ ಕೊರಗಜ್ಜ ಪವಾಡ ನಡೆದಿದೆ. ರಾತ್ರಿ ನಿದ್ದೆ ಕಣ್ಣಿನಲ್ಲಿ ನಡೆಯುತ್ತಿದ್ದ ಮಗುವನ್ನು ತಡೆದು ನಿಲ್ಲಿಸಿ ಕೊರಗಜ್ಜ ಪವಾಡ ಮೆರೆದಿದ್ದಾರೆ. ಉಡುಪಿಯ ಕುಂದಾಪುರ ಕೆದೂರು ಸಮೀಪದ ದಬ್ಬೆಕಟ್ಟೆಯಲ್ಲಿ ಮುಂಜಾನೆ 3 ಗಂಟೆಗೆ ಈ ಪವಾಡ ನಡೆದಿದೆ.

ಪುಟ್ಟ ಬಾಲಕಿಯೊಬ್ಬಳು ನಿದ್ದೆ ಕಣ್ಣಿನಲ್ಲಿ ಮನೆಯಿಂದ ಎದ್ದುಕೊಂಡು ಬಂದು ಉಡುಪಿ ಜಿಲ್ಲೆಯ ಕುಂದಾಪುರದ ಕೆದೂರಿನಲ್ಲಿ ಇರುವ ಕಾರಣಿಕದ ಕೊರಗಜ್ಜ ದೈವಸ್ಥಾನ ನಾಮಫಲಕದ ಮುಂದೆ ನಿಂತಿದೆ. ರಾತ್ರಿ 3 ಗಂಟೆಗೆ ಇದೇ ದಾರಿಯಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ವಿಶ್ವ ಎನ್ನುವವರು ಮಗುವನ್ನು ನೋಡಿ ಕಾರು ನಿಲ್ಲಿಸಿದ್ದರು. ಬಳಿಕ ಮಗುವನ್ನು ಮಾತಾಡಿಸಿದಾಗ ನಿದ್ದೆ ಕಣ್ಣಿನಿಂದ ನಡೆದುಕೊಂಡು ಬಂದ ವಿಷಯ ಬೆಳಕಿಗೆ ಬಂದಿದೆ. ಬಳಿಕ ಮಗುವನ್ನು ವಿಶ್ವ ಅವರು ಮರಳಿ ಮನೆಗೆ ಹೋಗಿ ಬಿಟ್ಟು ಮಾನವೀಯತೆ ಮರೆದಿದ್ದಾರೆ. ಕೊರಗಜ್ಜ ಪವಾಡದಿಂದಲೇ ಮಗು ಪಾರಾಗಿ ಬಂದಿದೆ ಎನ್ನುವುದು ಭಕ್ತರ ನಂಬಿಕೆಯಾಗಿದೆ.
- Advertisement -