- Advertisement -
- Advertisement -
ವಿಟ್ಲ: ನಿರಂತರ ಸುರಿಯುತ್ತಿರುವ ಮಳೆಗೆ ಅಲ್ಲಲ್ಲಿ ಮರಗಳು ನೆಲಕ್ಕುರುಳುತ್ತಿವೆ. ವಿಟ್ಲ ಮುಡ್ನೂರು ಗ್ರಾಮದ ಕಾಡುತೋಟದ ನಿವಾಸಿ ದೇವಪ್ಪ ನಾಯ್ಕ್ ಎಂಬವರ ಮನೆ ಮೇಲೆ ಮರ ಬಿದ್ದು ಭಾಗಶಃ ಹಾನಿಯಾದ ಘಟನೆ ನಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಗ್ರಾಂ ಪಂ ಸದಸ್ಯರಾದ ಪುನೀತ್ ಮಾಡತ್ತಾರ್ ಹಾಗೂ ಮಹಾಬಲೇಶ್ವರ ಭಟ್ ಭೇಟಿ ನೀಡಿ ಪರಿಶೀಲನೆ ನಡೆಸಿ ಕಂದಾಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕಂದಾಯ ಇಲಾಖೆಯು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾಗಿ ತಿಳಿದುಬಂದಿದೆ.
- Advertisement -