Saturday, June 28, 2025
spot_imgspot_img
spot_imgspot_img

ಕಾಸರಗೋಡು: ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

- Advertisement -
- Advertisement -

ಕಾಸರಗೋಡು: ಆವರಣ ಇಲ್ಲದ ಬಾವಿಗೆ ಬಿದ್ದು ಪಾಕತಜ್ಞರೋರ್ವರು ಮೃತಪಟ್ಟ ಘಟನೆ ಪೆರ್ಲ ಸಮೀಪದ ಕಾಟುಕುಕ್ಕೆ ಕುಡ್ತಡ್ಕದಲ್ಲಿ ನಡೆದಿದೆ. ಜನಾರ್ಧನ ನಾಯಕ್(42) ಮೃತಪಟ್ಟವರೆಂದು ಗುರುತಿಸಲಾಗಿದೆ.

ಮನೆ ಸಮೀಪದ ಬಾವಿಗೆ ಬಿದ್ದು ಈ ದುರ್ಘಟನೆ ನಡೆದಿದೆ. ಸಂಜೆ ನೀರು ಸೇದಲು ಹೋಗಿದ್ದ ಸಂದರ್ಭದಲ್ಲಿ ಕಾಲು ಜಾರಿ ಆಕಸ್ಮಿಕವಾಗಿ ಬಿದ್ದಿರಬಹುದೆಂದು ಶಂಕಿಸಲಾಗಿದೆ. ತವರು ಮನೆಗೆ ತೆರಳಿದ್ದ ಪತ್ನಿ ಮತ್ತು ಮಗು ಸಂಜೆ ಮನೆಗೆ ಬಂದಾಗ ಜನಾರ್ಧನ ನಾಪತ್ತೆಯಾಗಿದ್ದು, ಪರಿಸರ ವಾಸಿಗಳಿಗೆ ಮಾಹಿತಿ ನೀಡಿದ್ದರು. ಗಮನಿಸಿದಾಗ ಬಾವಿಗೆ ಬಿದ್ದಿರುವುದು ಪತ್ತೆಯಾಗಿದೆ.

ಪರಿಸರವಾಸಿಗಳು ಮತ್ತು ಮುಳುಗು ತಜ್ಞರ ಸಹಾಯದಿಂದ ಮೃತದೇಹವನ್ನು ಮೇಲಕ್ಕೆತ್ತಲಾಯಿತು. ಬದಿಯಡ್ಕ ಪೊಲೀಸರು ಮಹಜರು ನಡೆಸಿದರು ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಬಂಧಿಕರಿಗೆ ಬಿಟ್ಟು ಕೊಡಲಿದೆ.

- Advertisement -

Related news

error: Content is protected !!