- Advertisement -
- Advertisement -
ಮಂಗಳೂರು: ಕದ್ರಿ ಶಿವಬಾಗ್ನ ಐದನೇ ಮಹಡಿಯ ಅಪಾರ್ಟ್ಮೆಂಟ್ನಿಂದ ಬಿದ್ದು ವೈದ್ಯಕೀಯ ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಅಡ್ಯಾ ಮೂಲದ ಸಮಯ್(21) ಎಂದು ಗುರುತಿಸಲಾಗಿದ್ದು, ಪ್ರಸ್ತುತ ಕದ್ರಿ ಶಿವಬಾಗ್ನಲ್ಲಿ ವಾಸವಾಗಿದ್ದಾರೆ.
ಐದನೇ ಮಹಡಿಯ ಬಾಲ್ಕನಿಯಲ್ಲಿ ಸಮಯ್ ತನ್ನ ತಾಯಿಯೊಂದಿಗೆ ಮಾತನಾಡುತ್ತಿದ್ದ. ಮಾತನಾಡಲು ಬಗ್ಗಿದಾಗ ನೆಲಮಹಡಿಯಿಂದ ಆಯತಪ್ಪಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮಳೆ ನೀರಿನಿಂದ ಬಾಲ್ಕನಿಯಲ್ಲಿ ನೆಲ ಒದ್ದೆಯಾಗಿತ್ತು ಎಂದು ತಿಳಿದು ಬಂದಿದೆ.
ಸಮಯ್ ತಂದೆ ಸಿವಿಲ್ ಇಂಜಿನಿಯರ್ ಮತ್ತು ತಾಯಿ ಗೃಹಿಣಿ, ದಂಪತಿಗೆ ಇರುವ ಇಬ್ಬರು ಪುತ್ರರಲ್ಲಿ ಸಮಯ್ ಹಿರಿಯನಾಗಿದ್ದ. ಕದ್ರಿ ಪೊಲೀಸ್ ಠಾಣೆಯಲ್ಲಿ ಪುಕರಣ ದಾಖಲಾಗಿದೆ.
- Advertisement -