- Advertisement -
- Advertisement -
ವಿಟ್ಲ: ಇಡ್ಕಿದು-ಕುಳ ಗ್ರಾಮ ಪಂಚಾಯತ್ನ ಅಧ್ಯಕ್ಷರಾಗಿ ಮೋಹಿನಿ ಜಯಕರ್, ಉಪಾಧ್ಯಕ್ಷರಾಗಿ ಪದ್ಮನಾಭ ಕೊಡಂಚರಪಾಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸತತ ಎರಡನೇ ಅವಧಿಗೆ ಇವರಿಬ್ಬರು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುತ್ತಾರೆ.
ಭಾರತೀಯ ಜನತಾ ಪಕ್ಷದ ಬೆಂಬಲಿತ ಸದಸ್ಯರಾದ ಇವರನ್ನು ಪುತ್ತೂರು ಮಂಡಲ ಬಿಜೆಪಿ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ರವರು ಪಕ್ಷದ ವತಿಯಿಂದ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಪುರುಷೋತ್ತಮ ಮುಂಗ್ಲಿಮನೆ ಉಪಸ್ಥಿತರಿದ್ದರು. ಅಧ್ಯಕ್ಷ ಉಪಾಧ್ಯಕ್ಷರಾಗಿ ಆಯ್ಕೆಯಾದ ಇವರಿಗೆ ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಶಾಸಕ ಸಂಜೀವ ಮಠಂದೂರು, ನಿತೀಶ್ ಕುಂಬ್ರ ಮತ್ತು ಬಿಜೆಪಿ ಮುಖಂಡರು ಶುಭಹಾರೈಸಿದರು.
ಇಡ್ಕಿದು ಪಂಚಾಯತ್ನಲ್ಲಿ ಆಯ್ಕೆ ಪ್ರಕ್ರಿಯೆಯನ್ನು ನೋಡೆಲ್ ಅಧಿಕಾರಿಯಾಗಿ ಪ್ರೀತಂ ಪಿಡಬ್ಲ್ಯುಡಿ ಇಂಜಿನಿಯರ್ ಇವರು ನಡೆಸಿಕೊಟ್ಟರು.
Insta: glacharyajewellers
Fb: glacharya
- Advertisement -