Saturday, June 28, 2025
spot_imgspot_img
spot_imgspot_img

ಮಂಗಳೂರು: ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿಗೆ ಕರೆ ಮಾಡಿ ಬೆದರಿಕೆ; ಆರೋಪಿ ಬಂಧನ

- Advertisement -
- Advertisement -

ಮಂಗಳೂರು: ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿಗೆ ದೂರವಾಣಿ ಮೂಲಕ ಕರೆ ಮಾಡಿ ಬೆದರಿಕೆ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉರ್ವಾ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಮಂಗಳೂರು ಶಕ್ತಿನಗರ ನಿವಾಸಿ ಪುನೀತ್ ಶೆಟ್ಟಿ(36) ಎನ್ನಲಾಗಿದೆ.

ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಆರೋಪಿ ಪುನೀತ್‌ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉರ್ವಾ ಠಾಣಾ ಪೊಲೀಸರು ವಶಕ್ಕೆ ಪಡೆದು ಪರವಾನಿಗೆ ಹೊಂದಿದ ಪಿಸ್ತೂಲ್, 6 ಸಜೀವ ಗುಂಡುಗಳು, ಕೃತ್ಯಕ್ಕೆ ಬಳಸಿದ ಸೆಲ್ ಫೋನ್ ಹಾಗೂ ಕಿಯಾ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಯೂ ಈ ಹಿಂದೆ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಕಂಕನಾಡಿ ಟೌನ್ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿರುತ್ತಾನೆ. ಈತನ ಮೇಲೆ ಉರ್ವಾ ಠಾಣೆಯಲ್ಲಿ ಗಾಂಜಾ ಮಾರಾಟದ ಪ್ರಕರಣ, ಬರ್ಕೆ ಠಾಣಾ ವ್ಯಾಪ್ತಿಯಲ್ಲಿ ಶಸ್ತ್ರಾಸ್ತ ಬಳಸಿ ದೊಂಬಿ, ಹಲ್ಲೆ ಪ್ರಕರಣ, ದಕ್ಷಿಣ ಠಾಣೆಯಲ್ಲಿ ಹಲ್ಲೆ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ.

- Advertisement -

Related news

error: Content is protected !!