Sunday, June 29, 2025
spot_imgspot_img
spot_imgspot_img

ವಿಟ್ಲ: (ಆ.19) ಸೌಜನ್ಯ ಪ್ರಕರಣ; ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ (ರಿ) ವತಿಯಿಂದ ಬೃಹತ್‌ ಪ್ರತಿಭಟನಾ ಮೆರವಣಿಗೆ

- Advertisement -
- Advertisement -

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ (ರಿ)ವಿಟ್ಲ, ಯುವ ಘಟಕ ಹಾಗೂ ಮಹಿಳಾ ಸಂಘ, ಗೌಡರ ಸ್ವಸಹಾಯ ಸಂಘಗಳ ಒಕ್ಕೂಟ ಬಂಟ್ವಾಳ ವಲಯ ಇವರುಗಳು ನೇತೃತ್ವದಲ್ಲಿ ಕುಮಾರಿ ಸೌಜನ್ಯಳ ಸಾವಿಗೆ ನ್ಯಾಯ ದೊರಕಿಸಿಕೊಡಲು ಹಕ್ಕೊತ್ತಾಯ ಮಾಡುವ ಬೃಹತ್‌ ಪ್ರತಿಭಟನಾ ಮೆರವಣಿಗೆಯು ಆ.19 ಬೆಳಿಗ್ಗೆ ಗಂಟೆ 9:30ಕ್ಕೆ ವಿಟ್ಲದಲ್ಲಿ ನಡೆಯಲಿದೆ.

ಧರ್ಮಸ್ಥಳದ ಕುಮಾರಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಮಾಡಿದ ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ , ಅಲ್ಲಿಂದ ವಿಟ್ಲ ಜಂಕ್ಷನ್ ನಿಂದ ಖಾಸಗಿ ಬಸ್ಸು ನಿಲ್ದಾಣದವರೆಗೆ ಮೆರವಣಿಗೆ ನಡೆಯಲಿದೆ. ಬಳಿಕ ನಾಡ ಕಛೇರಿಯಲ್ಲಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರು, ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಿದ್ದಾರೆ.

- Advertisement -

Related news

error: Content is protected !!