Sunday, June 29, 2025
spot_imgspot_img
spot_imgspot_img

ಕಲುಷಿತ ನೀರು ಸೇವಿಸಿ ಹತ್ತು ವರ್ಷದ ಬಾಲಕಿ ಮೃತ್ಯು

- Advertisement -
- Advertisement -

ಕಲುಷಿತ ನೀರು ಸೇವಿಸಿ ಬಾಲಕಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತೀವ್ರ ಅಸ್ವಸ್ಥಳಾಗಿದ್ದ ಬಾಲಕಿಯನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಚಿಕ್ಕಹೊಸಹಳ್ಳಿಯ ಸರ್ಕಾರಿ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ ಭಾವನಾ (10) ಮೃತ ಬಾಲಕಿ. ಕಲುಷಿತ ನೀರು ಸೇವನೆಯಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದರಿಂದ ಆಕೆಯನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ. ಮಗಳ ಸಾವಿಗೆ ಕಲುಷಿತ ನೀರು ಸೇವನೆಯೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

ಕಲುಷಿತ ನೀರು ಸೇವಿಸಿ ಬಾಲಕಿ ಸಾವು ಪ್ರಕರಣದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಪ್ರತಿಕ್ರಿಯಿಸಿ, ಬಾಲಕಿ ಮೃತಪಟ್ಟಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದೇವೆ. ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಬಾಲಕಿ ಸಾವಿಗೆ ಕಾರಣ ತಿಳಿದು ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಕಲುಷಿತ ನೀರು ಸೇವನೆ ಮಾಡಿ ಸಾವನ್ನಪ್ಪಿದ್ದರೆ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!