Monday, June 30, 2025
spot_imgspot_img
spot_imgspot_img

ಪುತ್ತೂರು: (ಸೆ.9) ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ವತಿಯಿಂದ ನ್ಯೂಸ್ ಪುತ್ತೂರು ನೂತನ ಕಚೇರಿ ಉದ್ಘಾಟನೆ ಮತ್ತು ಪ್ರೇರಣಾ ಸಂಸ್ಥೆ ಪ್ರವರ್ತಿತ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

- Advertisement -
- Advertisement -

ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ವತಿಯಿಂದ ನ್ಯೂಸ್ ಪುತ್ತೂರು ನೂತನ ಕಚೇರಿ ಉದ್ಘಾಟನೆ ಮತ್ತು ಪ್ರೇರಣಾ ಸಂಸ್ಥೆ ಪ್ರವರ್ತಿತ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮವು ಸೆ.9 ರಂದು ಬೆಳಿಗ್ಗೆ 10.30ಕ್ಕೆ ಪುತ್ತೂರು ಮುಖ್ಯರಸ್ತೆಯ ಏಳ್ಮುಡಿ ಪ್ರಾವಿಡೆನ್ಸ್ ಪ್ಲಾಝಾದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಸ್ಟುಡಿಯೋ ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು ಕಚೇರಿ ಉದ್ಘಾಟಿಸುವರು. ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್‌(ರಿ.)ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಹಿಂದೂ ಮುಖಂಡ ಅರುಣ್ ಕುಮಾರ್‍ ಪುತ್ತಿಲ ನ್ಯೂಸ್ ಪುತ್ತೂರು ಲಾಂಛನ ಬಿಡುಗಡೆಗೊಳಿಸಲಿದ್ದಾರೆ. ಪುತ್ತೂರು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಜಯಂತ ನಡುಬೈಲು ವಿದ್ಯಾರ್ಥಿ ವೇತನ ವಿತರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಪುತ್ತೂರು ವೃತ್ತ ನಿರೀಕ್ಷಕ ಸುನೀಲ್ ಕುಮಾರ್, ಪುತ್ತೂರು ನಗರಸಭೆ ಆಯುಕ್ತ ಮಧು ಎಸ್.ಮನೋಹರ್, ಪುತ್ತೂರು ತಾಲೂಕು ಘಟಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ರಿ.) ಅಧ್ಯಕ್ಷ ಸಿದ್ದಿಕ್ ನೀರಾಜೆ, ಪುತ್ತೂರು ಕರ್ನಾಟಕ ಪತ್ರಕರ್ತರ ಸಂಘ(ರಿ.) ಅಧ್ಯಕ್ಷ ತಿಲಕ್ ರೈ ಕುತ್ಯಾಡಿ, ಪುತ್ತೂರು ತಾ.ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ರಾಮದಾಸ್ ಶೆಟ್ಟಿ ಭಾಗವಹಿಸಲಿದ್ದಾರೆ.

- Advertisement -

Related news

error: Content is protected !!