Sunday, June 29, 2025
spot_imgspot_img
spot_imgspot_img

ಮಂಗಳೂರು: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

- Advertisement -
- Advertisement -

ಮಂಗಳೂರು: ವ್ಯಕ್ತಿ ಓರ್ವ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು ನಗರದ ಮುಗ್ರೋಡಿಯಲ್ಲಿ ನಡೆದಿದೆ.

ಮೃತನನ್ನು ಚಂದ್ರಕಾಂತ್ (41) ಎಂದು ಗುರುತಿಸಲಾಗಿದೆ. ಸ್ಥಳೀಯ ಬಾಡಿಗೆ ಮನೆಯಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ಚಂದ್ರಕಾಂತ್ ಮೇಸ್ತ್ರೀ ಕೆಲಸದೊಂದಿಗೆ ಇತರ ಸಣ್ಣಪುಟ್ಟ ಕೆಲಸಗಳನ್ನು ಮಾಡುತ್ತಿದ್ದರು. ನರ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆದು ನಿನ್ನೆಯಷ್ಟೇ ಮನೆಗೆ ಬಂದಿದ್ದರು ಎನ್ನಲಾಗಿದೆ. ನಿನ್ನೆ ಸಂಜೆ ಹೊತ್ತಿಗೆ ಚಿಕ್ಕಮ್ಮನ ಮನೆಗೆ ಹೋಗಿ ಬರುತ್ತೇನೆಂದು ಹೋಗಿದ್ದ ಚಂದ್ರಕಾಂತ್ ತಡ ರಾತ್ರಿಯಾದರೂ ಬಾರದ ಕಾರಣ ಸ್ಥಳೀಯರು ಶೋಧಕಾರ್ಯ ನಡೆಸಿದ್ದರು.

ಬಳಿಕ ಆವರಣ ಇಲ್ಲದ ಬಾವಿ ಸಮೀಪ ಇಂದು ಅವರ ಚಪ್ಪಲಿ ಕಾಣ ಸಿಕ್ಕಿದ್ದರಿಂದ ಬಾವಿಯಲ್ಲಿ ನೋಡುವಾಗ ಶವ ಪತ್ತೆಯಾಗಿದೆ. ಮಂಗಳೂರು ನಗರ ಠಾಣಾ ಸಬ್ ಇನ್ಸ್‌ಪೆಕ್ಟರ್ ಅನಿತಾ ನಿಕಂ ಮತ್ತು ಅಗ್ನಿಶಾಮಕದಳದ ನೆರವಿನೊಂದಿಗೆ ಶವವನ್ನು ಮೇಲಕ್ಕೆತ್ತಿ ಮಹಜರು ಮಾಡಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!