Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಯುವಕನ ಮೇಲೆ ತಲ್ವಾರ್‌ ದಾಳಿ; ಆಸ್ಪತ್ರೆಗೆ ದಾಖಲು

- Advertisement -
- Advertisement -

ಬಂಟ್ವಾಳ: ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೈಂದಾಳದಲ್ಲಿ ನಿನ್ನೆ ರಾತ್ರಿ ಯುವಕನೋರ್ವನ ಮೇಲೆ ಅಪರಿಚಿತ ವ್ಯಕ್ತಿಗಳು ತಲ್ವಾರ್ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಗೊಳಗಾದ ಯುವಕನನ್ನು ನಾವೂರು ಮೈಂದಾಳದ ಮುಹಮ್ಮದ್ ನಿಸಾರ್‌‌ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ನಿಸಾರ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆ. 9ರಂದು ರಾತ್ರಿ ಸುಮಾರು 9.45 ಗಂಟೆ ಸುಮಾರಿಗೆ ಅಜ್ಜಿಮನೆಯಿಂದ ನಿಸಾರ್ ಅವರು ರಸ್ತೆ ಬದಿ ನಡೆದುಕೊಂಡು ಬರುತ್ತಿದ್ದ ವೇಳೆ ಮೈಂದಾಳ ಸೇತುವೆ ಬಳಿ ಗುರಿಮಜಲ್‌ ರಸ್ತೆ ತಲುಪಿದಾಗ ಅಟೋ ರಿಕ್ಷಾದಲ್ಲಿದ್ದ 5 ಜನರ ಪೈಕಿ ಇಬ್ಬರು ವ್ಯಕ್ತಿಗಳು ನಿಸಾರ್ ಅವರನ್ನು ಅಡ್ಡ ಗಟ್ಟಿ ಕೈಯಿಂದ ಹಲ್ಲೆ ನಡೆಸಿದ್ದಾರೆ.

ಅದೇ ಸಂದರ್ಭದಲ್ಲಿ ರಿಕ್ಷಾದ ಬಳಿ ತಲವಾರು ಹಿಡಿದುಕೊಂಡು ನಿಂತಿದ್ದ ಮೂವರು ವ್ಯಕ್ತಿಗಳ ಪೈಕಿ ಓರ್ವ ನಿಸಾರ್ ಗೆ ದಾಳಿ ಮಾಡುವಂತೆ ಹೇಳುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆದರೆ ನಿಸಾರ್ ಅವರ ಕೈಯಿಂದ ತಪ್ಪಿಸಿ ಓಡಿ ಹೋಗಿದ್ದು ಬಳಿಕ ಸ್ನೇಹಿತನಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಆತ ನಿಸಾರ್‌ನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಪೋಲೀಸರು ಅಲ್ಲಿನ ಸಿ.ಸಿ.ಕ್ಯಾಮರಾ ಪರಿಶೀಲನೆ ನಡೆಸುತ್ತಿದ್ದು, ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ. ಸದ್ಯ ಈ ಬಗ್ಗೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!