Sunday, June 29, 2025
spot_imgspot_img
spot_imgspot_img

ಸ್ವಾಮೀಜಿ ಬಂಧನವಾದರೆ ದೊಡ್ಡೋರ ಹೆಸರೆಲ್ಲ ಹೊರಗಡೆ ಬರುತ್ತೆ; ಚೈತ್ರಾ ಕುಂದಾಪುರ

- Advertisement -
- Advertisement -

ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ವಂಚಿಸಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ ರೋಚಕ ವಿಚಾರವನ್ನು ಬಹಿರಂಗ ಪಡಿಸಿದ್ದಾಳೆ.

ಬಂಧನದಲ್ಲಿರುವ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಇಂದು ಕಚೇರಿಗೆ ಕರೆದುಕೊಂಡು ಬಂದಿದ್ದಾರೆ. ಕಚೇರಿ ತಲುಪುವ ವೇಳೆ ಕಾರಿನಿಂದ ಇಳಿಯುವಾಗ, ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಈ ಪ್ರಕರಣದಲ್ಲಿ ಸ್ವಾಮೀಜಿ ಒಬ್ಬರಿದ್ದಾರೆ. ಅವರ ಬಂಧನವಾದ ಮೇಲೆ ಎಲ್ಲಾ ಸತ್ಯ ಹೊರಗಡೆ ಬರುತ್ತದೆ. ದೊಡ್ಡ-ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ. ಇಂದಿರಾ ಕ್ಯಾಂಟೀನ್ ಬಿಲ್​ಗಾಗಿ ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದು ಚೈತ್ರಾ ಕುಂದಾಪುರ ಆರೋಪಿಸಿದ್ದಾರೆ.

ನಾನು ಎ ಒನ್ ಆರೋಪಿಯಾಗಿರಲಿ, ಆದರೂ ಮುಂದೆ ಸತ್ಯ ಹೊರ ಬರಲಿದೆ ಎಂದು ಹೇಳಿಕೊಂಡಿದ್ದಾಳೆ. ಈ ಮೂಲಕ ಸ್ವಾಮೀಜಿ ಅಭಿನವ ಹಾಲಾಶ್ರಿ ಬಂಧನದ ಬಳಿಕ ಪ್ರಕರಣದಲ್ಲಿ ಮತ್ತಷ್ಟು ವಿಚಾರಗಳು ಹೊರ ಬರಲಿವೆ ಎಂಬ ಸೂಚನೆ ನೀಡಿದ್ದಾಳೆ ಆರೋಪಿ ಚೈತ್ರಾ.

ಗೋವಿಂದ ಬಾಬು 2017 ರಿಂದ ಇಂದಿರಾ ಕ್ಯಾಂಟೀನ್​ ನಡೆಸುತ್ತಿದ್ದಾರೆ. ಸುಮಾರು 98 ಇಂದಿರಾ ಕ್ಯಾಂಟೀನ್​ಗಳನ್ನು ಗುತ್ತಿಗೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಗೋವಿಂದ ಬಾಬು ಅವರು ಈ ಪ್ರಕರಣಕ್ಕೂ ಇಂದಿರಾ ಕ್ಯಾಂಟಿನ್ ಬಿಲ್ ವಿಚಾರಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

- Advertisement -

Related news

error: Content is protected !!