Sunday, June 29, 2025
spot_imgspot_img
spot_imgspot_img

ಕಾರ್ಕಳ: ಸೇನಾ ಕ್ಯಾಂಪ್‌‌ಗೆ ಸಿಲಿಂಡರ್ ಪೂರೈಸುವಂತೆ ನಂಬಿಸಿ ವಂಚನೆ

- Advertisement -
- Advertisement -

ಕಾರ್ಕಳ : ಸೇನಾ ಕ್ಯಾಂಪಿಗೆ ಗ್ಯಾಸ್ ಸಿಲಿಂಡರ್ ಪೂರೈಸುವಂತೆ ಗ್ಯಾಸ್ ಏಜೆನ್ಸಿಗೆ ಸಾವಿರಾರು ರೂಪಾಯಿ ವಂಚನೆ ಎಸೆಗಿರುವ ಘಟನೆ ಕಾರ್ಕಳದ ತೆಳ್ಳಾರು ಎಂಬಲ್ಲಿ ನಡೆದಿದೆ.

ಕಾರ್ಕಳ ತೆಳ್ಳಾರು ರಸ್ತೆಯಲ್ಲಿರುವ ಪ್ರಿಯದರ್ಶಿನಿ ಗ್ಯಾಸ್ ಏಜೆನ್ಸಿ ಮಾಲಕ ಕೃಷ್ಣಮೂರ್ತಿ ಎಂಬವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ ಕಾರ್ಕಳ ಮಾಳ ಕೂಡಬೆಟ್ಟು ಶಾಲೆಯಲ್ಲಿ ಆರ್ಮಿ ಕ್ಯಾಂಪ್ ಮಾಡಿದ್ದು ಈ ಕ್ಯಾಂಪ್‌ಗೆ 4 ಗ್ಯಾಸ್ ಸಿಲಿಂಡರ್ ಸರಬರಾಜು ಮಾಡುವಂತೆ ಕೇಳಿದ್ದನು.

ಇನ್ನು ಕೃಷ್ಣಮೂರ್ತಿ ತನ್ನ ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಆ ವ್ಯಕ್ತಿಯನ್ನು ಸಂಪರ್ಕಿಸುವಂತೆ ತಿಳಿಸಿ ಅದರಂತೆ ಸಿಬ್ಬಂದಿ ಸುನೀಲ್‌ರವರು ಕರೆ ಮಾಡಿ ಗ್ಯಾಸ್ ಸರಬರಾಜು ಮಾಡುವ ಬಗ್ಗೆ ವಿಚಾರಿಸಿದಾಗ, ಮೊದಲು ವೆರಿಫೈಗೆಂದು ನೀವು ನಮಗೆ ಹಣ ಹಾಕಬೇಕು, ನಂತರ ತಾವು ದುಪ್ಪಟ್ಟು ಹಣವನ್ನು ವಾಪಾಸು ಕೊಡುತ್ತೇವೆಂದು ಆತ ತಿಳಿಸಿದ್ದಾನೆ.

ಸುನಿಲ್ ಹಂತಹಂತವಾಗಿ ಒಟ್ಟು 92,513ರೂ. ಹಣವನ್ನು ಆರೋಪಿಯ ಖಾತೆಗೆ ಆನ್ಲೈನ್ ಮೂಲಕ ವರ್ಗಾವಣೆ ಮಾಡಿದ್ದು, ಆ ವ್ಯಕ್ತಿ ಇಂಡಿಯನ್ ಆರ್ಮಿಯ ಆಫೀಸರ್ ಎಂದು ನಂಬಿಸಿ ಹಣವನ್ನು ವರ್ಗಾವಣೆ ಮಾಡಿಸಿಕೊಂಡು, ಹಣವನ್ನು ವಾಪಾಸು ನೀಡದೇ ಮೋಸ ಮಾಡಿರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!