Monday, June 30, 2025
spot_imgspot_img
spot_imgspot_img

ವಿಟ್ಲ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

- Advertisement -
- Advertisement -

ವಿಟ್ಲ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ತೋಟದ ಕೆರೆಯಲ್ಲಿ ಪತ್ತೆಯಾದ ಘಟನೆ ಪುಣಚ ಗ್ರಾಮದ ಮಲೆತ್ತಡ್ಕದಲ್ಲಿ ನಡೆದಿದೆ. ಪುಣಚ ಗ್ರಾಮದ ಮಲೆತ್ತಡ್ಕ ನಿವಾಸಿ ಜಯರಾಮ ಭಟ್ ಮೃತಪಟ್ಟವರು.

ಇವರು ಬುಧವಾರದಿಂದ ನಾಪತ್ತೆಯಾಗಿದ್ದರು. ಜಯರಾಮ ಭಟ್ ರವರು ಬುಧವಾರ ಬೆಳಗ್ಗೆ ಮಗುವನ್ನು ಶಾಲೆ ಬಿಟ್ಟು, ಬಳಿಕ ವಾಪಸ್ಸು ಮನೆಗೆ ಹೋಗಿರಲಿಲ್ಲ. ಹೀಗಾಗಿ ಮನೆಯವರು ಸುತ್ತಮುತ್ತ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ.

ಇಂದು ಅವರ ಮೃತ ದೇಹ ಕೆರೆಯಲ್ಲಿ ಪತ್ತೆಯಾಗಿದೆ. ತೋಟದಲ್ಲಿ ನಡೆದು ಹೋಗುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಿಟ್ಲ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!