Saturday, June 28, 2025
spot_imgspot_img
spot_imgspot_img

ಮಂಗಳೂರು: ತುಂಬೆಯಲ್ಲಿ ಸರಣಿ ಅಪಘಾತ – ಕಾರು ಚಾಲಕನ ಅಜಾಗರೂಕತೆಯ ಚಾಲನೆ

- Advertisement -
- Advertisement -

ಮಂಗಳೂರು: ಚಾಲಕನ ಅಜಾಗರೂಕತೆಯಿಂದ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿಯಾದ ಘಟನೆ ಬಂಟ್ವಾಳದ ತುಂಬೆ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಪಾಣೆಮಂಗಳೂರು ಕಡೆ ಬರುತ್ತಿದ್ದ ಕಾರೊಂದು ತುಂಬೆ ಸ್ಟೀಲ್ ಅಂಗಡಿಯ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಸ್ಟೀಲ್ ಅಂಗಡಿಗೆ ಬಂದಿರುವ ಗ್ರಾಹಕರು ಹಾಗೂ ಮಾಲಕರ ಕಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ . ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ.ಆದರೆ ಘಟನೆಯಿಂದ ಮೂರು ಕಾರುಗಳು ಜಖಂಗೊಂಡಿದೆಯಾದರೂ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲಿಸರು ಭೇಟಿ ನೀಡಿದ್ದಾರೆ. ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದರಿಂದ ಕೆಲ ಕಾಲ ಸುಗಮ ವಾಹನ ಸಮಚಾರಕ್ಕೆ ಅಡಚಣೆ ಉಂಟಾಗಿತ್ತು. ಕೂಡಲೇ ಸ್ತಳೀಯ ಪೊಲೀಸರು ತೆರಳಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

- Advertisement -

Related news

error: Content is protected !!