Sunday, June 29, 2025
spot_imgspot_img
spot_imgspot_img

ವಿಟ್ಲ: ಹಿಂದೂ ಜಾಗರಣಾ ವೇದಿಕೆಯ ಪ್ರಮುಖ್ ಅಕ್ಷಯ್ ರಜಪೂತ್‌ಗೆ ಗಡಿಪಾರು ನೋಟಿಸ್

- Advertisement -
- Advertisement -

ವಿಟ್ಲ: ಹಲವಾರು ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಅಕ್ಷಯ್ ರಜಪೂತ್ ಗೆ ಗಡಿಪಾರು ನೋಟಿಸ್ ನೀಡಲಾಗಿದೆ.

ಕಲ್ಲಡ್ಕ ಬಾಳ್ತಿಲ ನಿವಾಸಿ ಅಕ್ಷಯ್ ರಜಪೂತ್ ಹಿಂದೂ ಜಾಗರಣಾ ವೇದಿಕೆಯ ಜವಾಬ್ದಾರಿಯನ್ನು ಹೊಂದಿದ್ದು ಇದೀಗ ಗಡಿಪಾರು ನೋಟೀಸ್ ನೀಡಿದ್ದಾರೆ.

ಗಡಿಪಾರು ನೋಟೀಸ್ ನಲ್ಲಿ ಏನಿದೆ ..?

ವಿಟ್ಲ ಠಾಣಾ ವ್ಯಾಪ್ತಿಯ ಯುವಕರನ್ನು ಸೇರಿಸಿಕೊಂಡು ಗುಂಪುಗಾರಿಕೆ ನಡೆಸುವುದು, ಹಲ್ಲೆ, ದೊಂಬಿ, ಮತೀಯ ಗಲಭೆಗಳನ್ನು ಸೃಷ್ಟಿಸಲು ಜೀವಬೆದರಿಕೆ ಹಾಕುವುದು, ನೈತಿಕ ಪೊಲೀಸ್ ಗಿರಿಯಂತಹ ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿದ್ದು ವಿಟ್ಲ ಪರಿಸರದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗಿ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಹಲವು ಬಾರಿ ಠಾಣೆಗೆ ಕರೆದು ಕಾನೂನು ತಿಳುವಳಿಕೆ ನೀಡಿದರೂ ಸಹ ತನ್ನ ಚಾಳಿ ಬಿಡದಿದ್ದು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟಾಗುವ ಸಾಧ್ಯತೆ ಇರುವುದರಿಂದ ಈತನನ್ನು ಗಡಿಪಾರು ಮಾಡಿ ಎಂದು ಬಂಟ್ವಾಳ ಠಾಣೆಯ ಪೊಲೀಸ್ ಉಪ ಅಧೀಕ್ಷರಕರು ಪ್ರಸ್ತಾವನೆ ಸಲ್ಲಿಸಿದರಿಂದ ದಿನಾಂಕ 9.10.2023 ರಂದು ಸಹಾಯಕ ಆಯುಕ್ತರ ನ್ಯಾಯಾಲಯ ಮಂಗಳೂರು ಉಪವಿಭಾಗ ಇಲ್ಲಿಗೆ ಹಾಜರಾಗುವಂತೆ ಅಕ್ಷಯ್ ರಜಪೂತ್‌ಗೆ ನೋಟೀಸ್ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

- Advertisement -

Related news

error: Content is protected !!