Sunday, June 29, 2025
spot_imgspot_img
spot_imgspot_img

ಉಪ್ಪಿನಂಗಡಿ: ಏಕಾಏಕಿ ಅಂಗಡಿಗೆ ನುಗ್ಗಿ ಹಲ್ಲೆ, ಬೆದರಿಕೆ

- Advertisement -
- Advertisement -

ಉಪ್ಪಿನಂಗಡಿ: ಏಕಾಏಕಿಯಾಗಿ ಅಂಗಡಿಗೆ ನುಗ್ಗಿ ಅಂಗಡಿ ಮಾಲೀಕನಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ್ ಎಂಬಲ್ಲಿ ನಡೆದಿದೆ.

ಉಪ್ಪಿನಂಗಡಿ ಗ್ರಾಮ ಪುತ್ತೂರು ನಿವಾಸಿ ಬಿ.ಕೆ ಅಬ್ದುಲ್ ರಹೀಮಾನ್ ಎಂಬವರು ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ್ ಎಂಬಲ್ಲಿ ಕೆ.ಜಿ.ಎನ್ ಜನರಲ್ ಸ್ಟೋರ್ ಹೊಂದಿದ್ದು, ದಿನಾಂಕ:05.10.2023ರಂದು ಸಂಜೆ ವ್ಯಾಪಾರ ಮಾಡಿಕೊಂಡಿದ್ದಾಗ, ಪರಿಚಯ ಇರುವ ಆರೋಪಿ ಜಕಾರಿಯ ಎಂಬುವರು ಏಕಾಏಕಿಯಾಗಿ ಅಂಗಡಿ ಒಳಗಡೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿದ್ದು, ಈ ವೇಳೆ ಇತರ ಆರೊಪಿಗಳಾದ ಹಮೀದ್, ರಫಿಕ್, ಅನ್ಸಾಫ್ ಎಂಬವರುಗಳು ಮರದ ದೊಣ್ಣೆಗಳೊಂದಿಗೆ ಹಲ್ಲೆ ನಡೆಸಲು ಬಂದಾಗ ಸಾರ್ವಜನಿಕರು ತಡೆದಿದ್ದು, ಆರೋಪಿಗಳೆಲ್ಲ ಸೇರಿ ಅಬ್ದುಲ್ ರಹೀಮಾನ್ ಎಂಬವರಿಗೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ. ಕೊಂದು ಮುಗಿಸುವುದಾಗಿ ಬೆದರಿಕೆ ಹಾಕಿ ತೆರಳಿರುತ್ತಾರೆ . ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಅ.ಕ್ರ 137/2023 ಕಲಂ: 448,324,323,506 ಜೊತೆಗೆ 34 ಭಾ.ದಂ.ಸಂ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!