Sunday, June 29, 2025
spot_imgspot_img
spot_imgspot_img

ಸುರತ್ಕಲ್: ಗುಂಡು ಹಾರಿಸಿಕೊಂಡು ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿ ಆತ್ಮಹತ್ಯೆ

- Advertisement -
- Advertisement -

ಸುರತ್ಕಲ್: ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಣಂಬೂರಿನಲ್ಲಿರುವ ಎನ್.ಎಂ.ಪಿ.ಎ. ಮುಖ್ಯ ದ್ವಾರದ ಬಳಿ ನಡೆದಿದೆ.

ಮೃತರನ್ನು ರಾಯಚೂರು ನಿವಾಸಿ, ಸಿಐಎಸ್‌ಎಫ್ ಸಬ್ ಇನ್ ಸ್ಪೆಕ್ಟರ್ ಝಾಕಿರ್ ಹುಸೈನ್(54) ಎಂದು ಗುರುತಿಸಲಾಗಿದೆ.

ಇನ್ನು ಝಾಕಿರ್ ಹುಸೈನ್ ಅವರು ನವ ಮಂಗಳೂರು ಬಂದರ್ ನ ಮುಖ್ಯ ದ್ವಾರದಲ್ಲಿ ರಾತ್ರಿ ಪಾಳಿಯ ಕೆಲಸ ನಿರ್ವಹಿಸಿದ್ದು, ಇಂದು ಬೆಳಗ್ಗೆ 6:30ರ ಸುಮಾರಿಗೆ ತನ್ನ ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೈದಿದ್ದಾರೆ ಎಂದು ತಿಳಿದು ಬಂದಿದೆ. ಪಣಂಬೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ‌ ನಡೆಸಿ ಪ್ರಕರಣದ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

- Advertisement -

Related news

error: Content is protected !!