Friday, June 27, 2025
spot_imgspot_img
spot_imgspot_img

ಸ್ನೇಹಿತರ ಮನೆಗೆ ಬಂದಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತ್ಯು

- Advertisement -
- Advertisement -

ವ್ಯಕ್ತಿ ಒರ್ವ ಸ್ನೇಹಿತರ ಮನೆಗೆ ಹಬ್ಬಕ್ಕೆಂದು ಬಂದಿದ್ದು ರೈಲು ಹಳಿ ದಾಟುವ ವೇಳೆಯಲ್ಲಿ ರೈಲಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಸಮೀಪದ ಅರವಂಟಿಗೆಪುರ ರೈಲ್ವೆ ಗೇಟ್ ಬಳಿ ನಡೆದಿದೆ.

ಚಿತ್ರದುರ್ಗ ಮೂಲದ ರಾಮು (40) ಮೃತ ವ್ಯಕ್ತಿ . ಬೊಮ್ಮಸಂದ್ರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರಾಮು ಮಂಗಳವಾರ ಸ್ನೇಹಿತರ ಜೊತೆಗೆ ಹಬ್ಬಕ್ಕೆ ಬಂದಿದ್ದರು. ರೈಲ್ವೆ ಹಳಿ ಸಮೀಪವೇ ಸಂಜೆ ಸ್ನೇಹಿತರ ಜೊತೆಗೆ ಎಣ್ಣೆ ಪಾರ್ಟಿ ಮಾಡಿದ್ದು, ಕುಡಿದ ಮತ್ತಿನಲ್ಲಿ ರೈಲ್ವೆ ಟ್ರ‍್ಯಾಕ್ ದಾಟಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡಿದ್ದಾರೆ. ರೈಲು ಬರುತ್ತಿರುವುದನ್ನು ಗಮನಿಸದೇ ರಾಮು ಹಳಿ ದಾಟಲು ಯತ್ನಿಸಿದ್ದು, ಈ ವೇಳೆ ರೈಲು ಡಿಕ್ಕಿ ಹೊಡೆದು ದೇಹ ಛಿದ್ರ ಛಿದ್ರವಾಗಿದೆ. ಮೃತ ದೇಹವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಈ ಕುರಿತು ಬೈಯಪ್ಪನಹಳ್ಳಿ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!