Saturday, June 28, 2025
spot_imgspot_img
spot_imgspot_img

200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

- Advertisement -
- Advertisement -
vtv vitla

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಬಳಿ ನಡೆದಿದೆ. ರಂಜನ್ (38) ಮೃತ ಚಾಲಕ.

ಪ್ರಪಾತಕ್ಕೆ ಬಿದ್ದ ಪರಿಣಾಮ ಮಾರುತಿ-800 ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ತಡೆಗೋಡೆ ಇಲ್ಲದೆ ಏಕಾಏಕಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಜನ್ನಾಪುರದಿಂದ ಕಳಸ ಕಡೆಗೆ ಹೋಗುವ ಸಂದರ್ಭ ಅವಘಡ ಸಂಭವಿಸಿದೆ. ತಿರುವಿನಲ್ಲಿ ತಡೆಗೋಡೆ ನಿರ್ಮಿಸಲು ಹಲವು ಬಾರಿ ಮನವಿ ಮಾಡಿದ್ದು, ಈ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಬಾಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!