Sunday, June 29, 2025
spot_imgspot_img
spot_imgspot_img

ಬಾಣಂತಿ ಪತ್ನಿಯನ್ನೇ ಕೊಂದ ಪೊಲೀಸ್‌ ಪೇದೆ..!

- Advertisement -
- Advertisement -

ಬಾಣಂತಿ ಪತ್ನಿಯ ಮೇಲೆ ಅನುಮಾನಗೊಂಡ ಪೊಲೀಸ್‌ ಪೇದೆಯೊಬ್ಬರು ಕೊಲೆ ಮಾಡಿರುವ ಘಟನೆ ದೇವನಹಳ್ಳಿಯ ಹೊಸಕೋಟೆ ತಾಲೂಕಿನ ಕೊಳತೂರು ಗ್ರಾಮದಲ್ಲಿ ನಡೆದಿದೆ.

ಕೊಲೆಗೈದ ವ್ಯಕ್ತಿ ಚಾಮರಾಜನಗರದಲ್ಲಿ ಪೊಲೀಸ್ ಪೇದೆಯಾಗಿರುವ ಕಿಶೋರ್ ಹಾಗೂ ಮೃತ ಪಟ್ಟ ಪ್ರತಿಭಾ ಎಂದು ಗುರುತಿಸಲಾಗಿದೆ.

ಒಂದು ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಇವರು , ಕಿಶೋರ್ ಯಾವಾಗಲೂ ಅನುಮಾನ ಹಾಗೂ ಅವರ ಕಡೆಯವರು ಸರಿಯಾಗಿ ತನ್ನನ್ನು ಉಪಚಾರ ಮಾಡಲ್ಲ ಎಂಬ ವಿಚಾರಕ್ಕೆ ಗಲಾಟೆ ಮಾಡುತ್ತಿದ್ದರು, ಹಲವು ಬಾರಿ ಗಲಾಟೆ ನಡೆದಿತ್ತು. ಆತನಿಗೆ ತನ್ನ ಪತ್ನಿ ಮೇಲೆ ಅನುಮಾನ ಇತ್ತು. ಆ ಅನುಮಾನವೇ ಇಂದು ಕೊಲೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಇನ್ನು 11 ದಿನಗಳ ಹಿಂದಷ್ಟೇ ಪ್ರತಿಭಾಗ ಮಗುವಾಗಿತ್ತು.ಹೀಗಾಗಿ ಬಾಣಂತನಕ್ಕೆ ತಂದೆ ಮನೆಗೆ ಬಂದಿದ್ದರು. ನಿನ್ನೆ ಎಂದಿನಂತೆ ಮಾವನ ಮನೆಗೆ ಬಂದವ ಮನೆಯಲ್ಲಿ ಪತ್ನಿ ಒಬ್ಬಳೇ ಇದ್ದ ವೇಳೆ ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ಫ್ಯಾನಿಗೆ ಸೀರೆ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಲು ಪ್ರಯತ್ನಿಸಿದ್ದಾನೆ. ಇದೇ ವೇಳೆ ಮೃತ ಪ್ರತಿಭಾ ಪೋಷಕರು ಮನೆಗೆ ಎಂಟ್ರಿಕೊಟ್ಟಿದ್ದು ಇದರಿಂದ ಬೆಚ್ಚಿಬಿದ್ದ ಕಿಶೋರ್ ಅಲ್ಲಿಂದ ಎಸ್ಕೆಪ್ ಆಗಿದ್ದಾನೆ.

ಇನ್ನು ಆರೋಪಿ ಕಿಶೋರ್ ತನ್ನ ಪತ್ನಿಯನ್ನು ಕೊಂದು ಕೋಲಾರಕ್ಕೆ ಹೋಗಿ ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಸದ್ಯ ಆರೋಪಿ ಕಿಶೋರ್ ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!