- Advertisement -
- Advertisement -
ಟಿವಿಎಸ್ ಎಕ್ಸೆಲ್ ಬೈಕ್ಗೆ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು-ಬನ್ನೇರುಘಟ್ಟ ಮುಖ್ಯರಸ್ತೆಯ ಮೀನಾಕ್ಷಿ ದೇವಾಲಯದ ಬಳಿ ನಡೆದಿದೆ.
ಮೃತಪಟ್ಟ ಮಹಿಳೆ ಶ್ಯಾನಭೋಗನಹಳ್ಳಿ ನಿವಾಸಿ ಸೆಲ್ವ (48) ಎಂದು ಗುರುತಿಸಲಾಗಿದೆ. ಮಾರತಹಳ್ಳಿಯ ಮಗಳ ಮನೆಗೆಂದು ಪತಿ ಜೊತೆ ಹೊರಟಿದ್ದ ಸಂದರ್ಭ ಅತಿವೇಗವಾಗಿ ಬಂದ ಖಾಸಗಿ ಬಸ್ ಟಿವಿಎಸ್ ಎಕ್ಸೆಲ್ ಬೈಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಹುಳಿಮಾವು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ರಸ್ತೆಯಲ್ಲಿ ಬಿದ್ದ ಮಹಿಳೆ ಮೇಲೆ ಬಸ್ ಹರಿದಿದ್ದು, ಸ್ಥಳದಲ್ಲೇ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಹುಳಿಮಾವು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ರವಾನೆ ಮಾಡಿ ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ.
- Advertisement -