


ಬಂಟ್ವಾಳ: ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ವತಿಯಿಂದ ಪ್ಲೋಗ್ ಅಂಡ್ ವಾಕ್ ಅಭಿಯಾನವು ಕಾರಂಜೇಶ್ವರ ದೇವಸ್ಥಾನದಲ್ಲಿ ಬಹಳ ಯಶಸ್ವಿಯಾಗಿ ನಡೆಯಿತು.
ವಿದ್ಯಾರ್ಥಿಗಳು ಪ್ರಕೃತಿಯನ್ನು ಉಳಿಸಲು ಹಾಗೂ ವ್ಯಕ್ತಿತ್ವ ವಿಕಾಸನಗೊಳಿಸಲು ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ಮಂಗಳೂರು ವಿಭಾಗದ ವತಿಯಿಂದ ಪ್ಲೋಗ್ ಅಂಡ್ ವಾಕ್ ಅಭಿಯಾನವು ಬಂಟ್ವಾಳದ ಕಾರಿಂಜೇಶ್ವರ ದೇವಸ್ಥಾನದಲ್ಲಿ ಜರಗಿತು. ಈ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳಿಂದ 32 ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಭಾಗವಹಿಸಿದರು, ಈ ಅಭಿಯಾನವನ್ನು ಬೆಳಗ್ಗೆ 8:30ಕ್ಕೆ ಸರಿಯಾಗಿ ಪ್ರಾರಂಭಿಸಲಾಯಿತು.

ಈ ಅಭಿಯಾನವನ್ನು ಭಗವಂತ ಶಿವನಿಗೆ ಪೂಜೆಯನ್ನು ಸಲ್ಲಿಸುವ ಮುಖಾಂತರ ಪ್ರಾರಂಭಿಸಲಾಯಿತು. ಪೂಜೆ ಮುಗಿಸಿದ ನಂತರ ಈ ಅಭಿಯಾನವು ಅಧಿಕೃತವಾಗಿ ಪ್ರಾರಂಭಗೊಂಡಿತು. ವಿದ್ಯಾರ್ಥಿಗಳು ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿದರು, ಪ್ಲಾಸ್ಟಿಕ್ ಹಾಗೂ ಇತರೆ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಲಾಯಿತು.
ಈ ಅಭಿಯಾನವು ಕೇವಲ ಸ್ಥಳವನ್ನು ಸ್ವಚ್ಚಗೊಳಿಸುವುದು ಮಾತ್ರವಲ್ಲದೆ ಆ ಪರಿಸರವನ್ನು ಸ್ವಚ್ಛವಾಗಿ ಇರಿಸಲು ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕೆಲಸವು ಮಾಡಿತು. ಈ ಅಭಿಯಾನದಲ್ಲಿ ಭಾಗವಹಿಸಿದ ವಿದ್ಯಾರ್ಥಿ ಸ್ವಯಂಸೇವಕರು ಕಸದ ವಿಲೇವಾರಿಯ ಅಗತ್ಯತೆಯನ್ನು ಜನಸಾಮಾನ್ಯರಿಗೆ ತಿಳಿಸಿಕೊಟ್ಟರು.

ಈ ಅಭಿಯಾನದ ಯಶಸ್ವಿಗೆ ನೇರವಾಗಿ ಕಾರಣಿಕರ್ತರಾದ ದೇವಾಲಯದ ಆಡಳಿತ ಸಮಿತಿಯ ಚಂದ್ರಶೇಖರ್ ಶೆಟ್ಟಿ ಮತ್ತು ಪ್ರವೀಣ್ ಪೂಜಾರಿಯವರು ಸಹ ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸಿದರು. ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ನ ಪ್ರಮುಖರಾದ ನಿಶಾನ್ ಆಳ್ವ ಕಾವೂರು, ನಿಶ್ಚಿತ್ ಬಂಟ್ವಾಳ ಹಾಗೂ ಕ್ಯಾತ್ ಶೆಟ್ಟಿ ಅವರು ಉಪಸ್ಥಿತರಿದ್ದರು.
ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ಸಂಸ್ಥೆಯು ಪ್ಲೋಗ್ ಅಂಡ್ ವಾಕ್ ಅಭಿಯಾನದ ಮೂಲಕ ಪರಿಸರ ರಕ್ಷಣೆ ಹಾಗೂ ಪರಿಸರದ ಬೆಳವಣಿಗೆಯ ಕಾರ್ಯವನ್ನು ಮಾಡಿದೆ.