Friday, June 27, 2025
spot_imgspot_img
spot_imgspot_img

ಉಪ್ಪಿನಂಗಡಿ: ಚಾಲಕನ ಅಜಾಗರೂಕತೆಯಿಂದ ಅಪಘಾತ; ವ್ಯಕ್ತಿ ಮೃತ್ಯು..!

- Advertisement -
- Advertisement -

ಉಪ್ಪಿನಂಗಡಿ: ಚಾಲಕನ ವಾಹನ ನಿರ್ಲಕ್ಷ್ಯತನದಿಂದ ಚಲಾಯಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್‌ ಬಳಿ ಇರುವ ಭಾರತ್‌ ಪೆಟ್ರೋಲ್‌ ಬಂಕ್‌ ಎದುರು ನಡೆದಿದೆ.

ಮೃತಪಟ್ಟ ವ್ಯಕ್ತಿ ಬಶೀರ್‌ ಸಾಹೇಬ್‌ ಎಂದು ಗುರುತಿಸಲಾಗಿದೆ.

ವಾಹನ ಪಾರ್ಕ್‌ ಮಾಡುವ ಸಮಯದಲ್ಲಿ ವ್ಯಕ್ತಿಯೋರ್ವರಿಗೆ ಚಾಲಕ ತನ್ನ ಅಜಾಗರೂಕತೆಯಿಂದ ವಾಹನ ಚಲಾಯಿಸಿ
ಅಪಘಾತಪಡಿಸಿರುವ ಪರಿಣಾಮ ನೆಲಕ್ಕೆ ಬಿದ್ದು ಎಡಕಿವಿ ಮತ್ತು ತಲೆಗೆ ಗಾಯಗೊಂಡು ಮೃತಪಟ್ಟಿದಾರೆ. ಅಪರಿಚಿತ ಅಪಘಾತವಾಗಿರುವುದನ್ನು ತಿಳಿದು ಗಾಯಾಳುವನ್ನು ಆಸ್ಪತ್ರೆಗೆ ಚಿಕಿತ್ಸೆಗೆ ಸೇರಿಸದೇ, ಪೊಲೀಸ್‌ ಠಾಣೆಗೆ ಮಾಹಿತಿ ನೀಡದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಘಟನೆಯ ಬಗ್ಗೆ ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

- Advertisement -

Related news

error: Content is protected !!