Sunday, June 29, 2025
spot_imgspot_img
spot_imgspot_img

ವಿಶ್ವಕಪ್ ಮ್ಯಾಚ್ ವೇಳೆ ಟಿವಿ ಆಫ್ ಮಾಡಿದ್ದಕ್ಕೆ ಮಗನ ಕೊಲೆಗೈದ ತಂದೆ!

- Advertisement -
- Advertisement -

ಪುತ್ರನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಮೃತ ದುರ್ದೈವಿ ಪುತ್ರನನ್ನು ದೀಪಕ್ ನಿಶಾದ್ ಹಾಗೂ ಆರೋಪಿ ತಂದೆಯನ್ನು ಗಣೇಶ್ ಪ್ರಸಾದ್ ಎಂದು ಗುರುತಿಸಲಾಗಿದೆ.ವಿಶ್ವಕಪ್ ಫೈನಲ್ ಕ್ರಿಕೆಟ್ ಮ್ಯಾಚ್ ವೇಳೆ, ಗಣೇಶ್ ಪ್ರಸಾದ್ ಪಂದ್ಯವನ್ನು ನೋಡುತ್ತಿರುವಾಗ ಮಗ ಟಿವಿ ಆಫ್ ಮಾಡಿದ್ದಾನೆ. ಇದರಿಂದ ತಂದೆ ಸಿಟ್ಟಿಗೆದ್ದು ಈ ಕೃತ್ಯ ಎಸಗಿದ್ದಾನೆ.

ಟಿವಿ ನೋಡುತ್ತಿದ್ದ ತಂದೆಯ ಬಳಿ ಮಗ ಅಡುಗೆ ಮಾಡುವಂತೆ ಹೇಳಿದ್ದಾನೆ. ಬೇಗ ಊಟ ಮಾಡಿ ಆಮೇಲೆ ಟಿವಿ ನೋಡು ಎಂದು ಮಗ ತಂದೆಗೆ ಒತ್ತಾಯಿಸಿದ್ದಾನೆ. ಆದರೆ ಗಣೇಶ್ ಮಗನ ಮಾತಿಗೆ ಕ್ಯಾರೇ ಎಂದಿಲ್ಲ. ಹೀಗಾಗಿ ತಂದೆಯ ಗಮನವನ್ನು ಬೇರೆ ಕಡೆ ಸೆಳೆಯುವ ಸಲುವಾಗಿ ಮಗ ಟಿವಿಯನ್ನೇ ಆಫ್ ಮಾಡಿದ್ದಾನೆ. ಪರಿಣಾಮ ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಈ ಮಾತಿನ ಚಕಮಕಿ ಹೊಡೆದಾಡುವ ಮಟ್ಟಿಗೆ ತಲುಪಿದ್ದು, ಎಲೆಕ್ಟ್ರಿಕ್ ಕೇಬಲ್ ವೈರ್ ತೆಗೆದುಕೊಂಡು ಮಗನ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ. ಘಟನೆಯ ಬಳಿಕ ಗಣೇಶ್ ಪ್ರಸಾದ್ ಸ್ಥಳದಿಂದ ಪಾರಾರಿಯಾಗಿದ್ದಾನೆ. ಬಳಿಕ ಕಾನ್ಪುರ ಪೊಲೀಸರು ಆತನನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!